ಝೈಕೋವ್-ಡಿ ಲಸಿಕೆ ಉತ್ಪಾದನೆ ವೀಕ್ಷಿಸಿದ ಪ್ರಧಾನಿ ಮೋದಿ
ಅಹಮದಾಬಾದ್, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಗುಜರಾತ್ನ ಅಹಮದಾಬಾದ್ನಲ್ಲಿರುವ ಝೈಡಸ್ ಕ್ಯಾಡಿಲಾ ಲಸಿಕೆ ತಯಾರಕ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ಝೈಕೋವ್-ಡಿ ಕೊರೊನಾ ವೈರಸ್ ಲಸಿಕೆಯ ಅಭಿವೃದ್ಧಿ ಪ್ರಕ್ರಿಯೆಗಳನ್ನು ಪರಾಮರ್ಶಿಸಿದರು.
ಅಹಮದಾಬಾದ್ ನಗರದಿಂದ 20 ಕಿಮೀ ದೂರದಲ್ಲಿರುವ ಚಾಂಗೋದರ್ ಕೈಗಾರಿಕಾ ಪ್ರದೇಶದಲ್ಲಿರುವ ಝೈಡಸ್ ಕ್ಯಾಡಿಲಾ ಪಾರ್ಕ್ಗೆ ಬೆಳಿಗ್ಗೆ 9.30ರ ಸುಮಾರಿಗೆ ಆಗಮಿಸಿದ ಅವರು, ಕೊರೊನಾ ವೈರಸ್ ಲಸಿಕೆ ತಯಾರಿಕೆ, ಅದರ ಸಂಗ್ರಹ, ವಿತರಣೆ ವಿಚಾರವಾಗಿ ಸುಮಾರು ಒಂದು ಗಂಟೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್ಎ ಆಧಾರಿತ ಸ್ವದೇಶಿ ಲಸಿಕೆಯ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಅಹಮದಾಬಾದ್ನ ಝೈಡಸ್ ಬಯೋಟೆಕ್ ಪಾರ್ಕ್ಗೆ ಭೇಟಿ ನೀಡಿದ್ದೆ. ಈ ಪ್ರಯತ್ನದ ಹಿಂದಿರುವ ತಂಡವನ್ನು ನಾನು ಶ್ಲಾಘಿಸುತ್ತೇನೆ. ಈ ಪ್ರಯಾಣದಲ್ಲಿ ಅವರಿಗೆ ಬೆಂಬಲವಾಗಿರಲು ಭಾರತ ಸರ್ಕಾರ ಸಕ್ರಿಯವಾಗಿ ಅವರೊಂದಿಗೆ ಕೆಲಸ ಮಾಡುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಝೈಕೋವ್-ಡಿ ಕೊರೊನಾ ವೈರಸ್ ಲಸಿಕೆಯ ಮೊದಲ ಹಂತದ ಕ್ಲಿನಿಕಲ್ ಪ್ರಯೋಗ ಪೂರ್ಣಗೊಂಡಿದ್ದು, ಆಗಸ್ಟ್ ತಿಂಗಳಲ್ಲಿ ಎರಡನೆಯ ಹಂತದ ಪ್ರಯೋಗ ಆರಂಭಿಸಿರುವುದಾಗಿ ಝೈಡಸ್ ಕ್ಯಾಡಿಲಾ ಪ್ರಕಟಿಸಿತ್ತು. ಎರಡನೆಯ ಹಂತ ಮುಗಿದ ಬಳಿಕ ಮೂರನೇ ಮತ್ತು ಕೊನೆಯ ಹಂತದ ಪ್ರಯೋಗ ನಡೆಯಲಿದ್ದು, ಆ ವೇಳೆಗೆ ಲಸಿಕೆಯ ಗುಣಮಟ್ಟದ ಮತ್ತು ದಕ್ಷತೆಯ ಖಚಿತ ವಿವರ ಸಿಗಲಿದೆ.

ಅಹಮದಾಬಾದ್ನಲ್ಲಿ ವೀಕ್ಷಣೆ ಬಳಿಕ ಮೋದಿ ಅವರು ಹೈದರಾಬಾದ್ನತ್ತ ತೆರಳಲು ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿದರು. ಹೈದರಾಬಾದ್ನಲ್ಲಿ ಅವರು ಭಾರತ್ ಬಯೋಟೆಕ್ ಕಂಪೆನಿಯ ಕೋವ್ಯಾಕ್ಸಿನ್ ಲಸಿಕೆ ಘಟಕಕ್ಕೆ ಭೇಟಿ ನೀಡಿ ಪರಾಮರ್ಶೆ ನಡೆಸಲಿದ್ದಾರೆ. ಮೋದಿ ಅವರು ಕೊರೊನಾ ಲಸಿಕೆ ಸಂಬಂಧ ಹೈದರಾಬಾದ್ಗೆ ತೆರಳುತ್ತಿದ್ದರೂ ಈ ಭೇಟಿ ರಾಜಕೀಯ ಮಹತ್ವ ಕೂಡ ಪಡೆದುಕೊಂಡಿದೆ. ಡಿಸೆಂಬರ್ 1ರಂದು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಇಲ್ಲಿ ಬಿಜೆಪಿ ಭಾರಿ ಪೈಪೋಟಿಗೆ ಇಳಿದಿದೆ.
#WATCH Prime Minister Narendra Modi visits Zydus Biotech Park in Ahmedabad, reviews the development of #COVID19 vaccine candidate ZyCOV-D pic.twitter.com/vEhtNMf1YE
— ANI (@ANI) November 28, 2020
ಹೈದರಾಬಾದ್ನಲ್ಲಿ ಮಧ್ಯಾಹ್ನ ವೀಕ್ಷಣೆ ನಂತರ ಮೋದಿ ಅವರು ಪುಣೆಗೆ ತೆರಳಲಿದ್ದು, ಅಲ್ಲಿ ಸೆರಮ್ ಸಂಸ್ಥೆಯು ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಉತ್ಪಾದಿಸುತ್ತಿರುವ ಕೋವಿಶೀಲ್ಡ್ ಲಸಿಕೆಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications