ಪ್ರಧಾನಿ ಗುಜರಾತ್ ಭೇಟಿ; ತಾಯಿ ಹೀರಾಬೆನ್ ಆಶೀರ್ವಾದ ಪಡೆದ ಮೋದಿ
ಅಹಮದಾಬಾದ್, ಮಾರ್ಚ್ 12: ತವರು ರಾಜ್ಯ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ತಾಯಿ ಹೀರಾಬೆನ್ರನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದು, ಅದರಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್ಗೆ ಭೇಟಿ ನೀಡಿದ್ದಾರೆ. ಇದೇ ವರ್ಷದ ಕೊನೆಯಲ್ಲಿ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದೆ.
ಶುಕ್ರವಾರ ಅಹ್ಮದಾಬಾದ್ ಏರ್ಪೋರ್ಟ್ನಿಂದ ಗಾಂಧಿನಗರದಲ್ಲಿರುವ ಕಮಲಂ ಬಿಜೆಪಿ ಪ್ರಧಾನ ಕಚೇರಿಯವರೆಗೆ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ, ಬಳಿಕ ಸಂಜೆ ವೇಳೆ ತಮ್ಮ ತಾಯಿ ಹೀರಾಬೆನ್ ಇದ್ದ ಮನೆಗೆ ಹೋಗಿ, ಅವರ ಆಶೀರ್ವಾದ ಪಡೆದಿದ್ದಾರೆ. ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ. ಇತ್ತೀಚೆಗೆ ಸುಷ್ಮಾ ಸ್ವರಾಜ್ ಜನ್ಮ ದಿನದಂದು ಪ್ರಧಾನಿ ಮೋದಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಹಳೆಯ ಘಟನೆಯೊಂದರ ಮೆಲುಕು ಹಾಕಿದ್ದರು.

ಇದಕ್ಕೂ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅಹ್ಮದಾಬಾದ್ನಲ್ಲಿ ಗುಜರಾತ್ ಪಂಚಾಯತ್ ಮಹಾಸಮ್ಮೇಳನದಲ್ಲಿ ಭಾಷಣ ಮಾಡಿದರು. ಈ ವೇಳೆ ಮಹಾತ್ಮ ಗಾಂಧಿ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಉಲ್ಲೇಖ ಮಾಡಿದ ಮೋದಿ, ಮಹಾತ್ಮ ಗಾಂಧಿ ಯಾವಾಗಲೂ ಗ್ರಾಮೀಣ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿದ್ದರು. ಹಳ್ಳಿಗಳು ಸ್ವಾವಲಂಬಿಯಾಗಬೇಕು ಎಂಬುದು ಅವರ ಪರಿಕಲ್ಪನೆಯಾಗಿತ್ತು. ನಾವಿಂದು ಗ್ರಾಮೀಣ ವಿಕಾಸದ ಮೂಲಕ ಬಾಪು ಕನಸನ್ನು ನನಸು ಮಾಡಿದ್ದೇವೆ ಎಂದು ಹೇಳಿದರು.
ಈ ಮೊದಲು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಇನ್ನಷ್ಟು ಪರಿಣಾಮಕಾರಿಯಾಗಿ ಜನಸೇವೆ ಮಾಡುವ ವಿಧಾನಗಳ ಬಗ್ಗೆ ಚರ್ಚಿಸಿದರು.

ಜನರು ನೀಡುತ್ತಿರುವ ಬೆಂಬಲ, ಸಹಕಾರಕ್ಕೆ ನಾನು ವಿಧೇಯನಾಗಿರುತ್ತೇನೆ. ಅಪಾರ ಸಂಖ್ಯೆಯ ಜನರು ಬೆಂಬಲ ನೀಡಿದಾಗ ನಮ್ಮಲ್ಲಿ ಕೆಲಸ ಮಾಡುವ ಉತ್ಸಾಹವೂ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಗುಜರಾತ್ನಲ್ಲಿ ಈಗಿನಿಂದಲೇ ಚುನಾವಣೆ ಪ್ರಚಾರ ಆರಂಭ ಮಾಡಿದಂತಿದೆ. ಗುಜರಾತ್ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಭೇಟಿ ಅತ್ಯಂತ ಮಹತ್ವ ಎನ್ನಿಸಿದೆ. ಈಗಷ್ಟೇ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications