ಪತಂಜಲಿ ಕೊರೊನಾ ಔಷಧಿಗೆ ಅನುಮತಿ ನಿರಾಕರಿಸಿದ ರಾಜಸ್ಥಾನ
ಅಹಮದಬಾದ್, ಜೂನ್ 25: ಕೊರೊನಾ ವೈರಸ್ ಕೇಸ್ಗಳು ತೀವ್ರವಾಗುತ್ತಿರುವ ಸಂದರ್ಭದಲ್ಲಿ ಬಾಬಾ ರಾಮದೇವ್ ಅವರ ಪತಂಜಲಿ ಸಂಸ್ಥೆ ಕೊರೊನಾ ವಿರೋಧಿ ಔಷಧಿ ಬಿಡುಗಡೆ ಮಾಡಿದೆ. ಆದರೆ, ಈ ಔಷಧಿಗೆ ರಾಜಸ್ಥಾನ ಮತ್ತು ಮಹಾರಾಷ್ಟ್ರ ಸರ್ಕಾರ ಬ್ರೇಕ್ ಹಾಕಿದೆ.
ಶೇಕಡಾ 100ರಷ್ಟು ಕೊರೊನಾ ವಿರುದ್ಧ ಈ ಔಷಧ ಹೋರಾಡಲಿದೆ ಮತ್ತು ಫಲಿತಾಂಶವೂ ನೀಡಲಿದೆ ಎಂದು ಪ್ರಚಾರ ಮಾಡಲಾಗುತ್ತಿದೆ. ಆದರೆ. ''ಪತಂಜಲಿಯ ಕೊರೊನಾ ವಿರೋಧಿ ಔಷಧ ಮಾರಾಟಕ್ಕೆ ರಾಜ್ಯದಲ್ಲಿ ನಾವು ಅನುಮತಿ ನೀಡುವುದಿಲ್ಲ. ಐಸಿಎಂಆರ್ ಸಂಸ್ಥೆಯಿಂದ ಅನುಮತಿ ಸಿಕ್ಕರೆ ಮಾತ್ರ ಅವಕಾಶ'' ಎಂದು ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಹೇಳಿದ್ದಾರೆ.

''ಕೊರೊನಾ ವೈರಸ್ ಗುಣಪಡಿಸಲು ಔಷಧ ಎಂದು ಹೇಳಿಕೊಳ್ಳುತ್ತಿರುವ ಪತಂಜಲಿ ಕಂಪನಿ ಸರ್ಕಾರದ ಅನುಮತಿ ಪಡೆದುಕೊಂಡಿಲ್ಲ. ಈ ಕುರಿತು ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಬಂದಿಲ್ಲ. ಅನುಮತಿಯೂ ನೀಡಿಲ್ಲ'' ಎಂದು ರಘು ಶರ್ಮಾ ಮಾಹಿತಿ ನೀಡಿದ್ದಾರೆ.
We will not give permission to Patanjali to sell their anti-Corona drug in the state. We will decide once they get approval from Indian Council of Medical Research (ICMR): Raghu Sharma, Rajasthan Health Minister pic.twitter.com/yWjpogn5bJ
— ANI (@ANI) June 25, 2020
''ಕೊರೊನಾ ಔಷಧಿಗೆ ಆಯುಷ್ ಸಚಿವಾಲಯ ಅನುಮೋದನೆ ನೀಡಿಲ್ಲ. ಹಾಗಾಗಿ, ರಾಜ್ಯದಲ್ಲಿ ಮಾರಾಟ ಮತ್ತು ಪ್ರಚಾರ ಮಾಡಿದ್ರೆ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ'' ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.
Maharashtra govt will take legal action against Patanjali if they try to advertise or sell their anti-Corona drug as AYUSH Ministry is yet to approve the medicine: Anil Deshmukh, Maharashtra Home Minister (File pic) pic.twitter.com/bYTHnYD0Q6
— ANI (@ANI) June 25, 2020
ಅಂದ್ಹಾಗೆ, ಪತಂಜಲಿ ಸಂಸ್ಥೆಯ ಕೊರೊನಾ ವಿರೋಧಿ ಔಷಧಿ ಅಧಿಕೃತವಾಗಿ ಬಿಡುಗಡೆಯಾದ ಕೆಲವೆ ಗಂಟೆಗಳಲ್ಲಿ ಆಯುಷ್ ಸಚಿವಾಲಯ ಮಾರಾಟ ಮತ್ತು ಪ್ರಚಾರಕ್ಕೆ ಬ್ರೇಕ್ ಹಾಕಿದೆ. ಔಷಧಿ ಕುರಿತು ಪೂರ್ತಿ ವಿವರ ಕೊಡಿ, ಪ್ರಚಾರ ಮಾಡುವುದು ನಿಲ್ಲಿಸಿ ಎಂದು ಸೂಚಿಸಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications