ಅದಾನಿ ಗ್ರೂಪ್ನ 'ಮುಂದ್ರಾ' ಬಂದರಿನಲ್ಲಿ ಹೆರಾಯಿನ್ ವಶಕ್ಕೆ
ಗುಜರಾತ್ ಜು.13: ದೇಶದಲ್ಲೇ ಅತಿ ದೊಡ್ಡ ಖಾಸಗಿ ಬಂದರು ಎನ್ನಲಾಗುವ ಗುಜರಾತ್ನಲ್ಲಿರುವ ಗಲ್ಫ್ ಆಫ್ ಕಚ್ನಲ್ಲಿನ ಮುಂದ್ರಾ ಬಂದರಿನಲ್ಲಿ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ 350 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ಇದು ಬಂದರಿನಲ್ಲಿ ಈ ವರ್ಷದ ನಡೆದ ಎರಡನೇ ದಾಳಿಯಾಗಿದೆ.
ರಾಜ್ಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೆರಾಯಿನ್ ಹಾಗೂ ಕಂಟೈನರ್ ವಶಪಡಿಸಿಕೊಳ್ಳಲಾಗಿದೆ. ಅದಾನಿ ಗ್ರೂಪ್ ನಿರ್ವಹಣೆಯ 'ಮುಂದ್ರಾ' ಬಂದರಿನಲ್ಲಿ ಕಳೆದ ಒಂದು ವರ್ಷದಲ್ಲಿ ಎರಡನೇ ಬಾರಿ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ.
ಜವಳಿ ಸಾಗಾಟಕ್ಕೆ ಅಧಿಕೃತವಾಗಿ ಒಪ್ಪಿಗೆ ಪಡೆದಿದ್ದ ಕಂಟೈನರ್ಗಳಲ್ಲಿ 70 ಕೆಜಿಗೂ ಹೆಚ್ಚು ಹೆರಾಯಿನ್ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅಧಿಕಾರಿಗಳು ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಜಂಟಿ ಕಾರ್ಯಾಚರಣೆ ಕುರಿತು ಗುಜರಾತ್ ಪೊಲೀಸ್ ಮಹಾನಿರ್ದೇಶಕ ಆಶಿಶ್ ಭಾಟಿಯಾ ಸುದ್ದಿಗೋಷ್ಠಿ ನಡೆಸಿ ಅಧಿಕೃತ ಮಾಹಿತಿ ನೀಡುವ ಸಾಧ್ಯತೆ ಇದೆ.
21,000 ಕೋಟಿ ಹೆರಾಯಿನ್ ಪತ್ತೆ; ಹಿಂದಿನ ವರ್ಷದ ಸೆಪ್ಟೆಂಬರ್ನಲ್ಲಿ ಇರಾನ್ನ ಅಬ್ಬಾಸ್ ಬಂದರಿನಿಂದ ಅಧಿಕೃತವಾಗಿ ಅರೆ-ಸಂಸ್ಕರಿಸಿದ ಟಾಲ್ಕ್ ಕಲ್ಲುಗಳನ್ನು ಸಾಗಿಸುವ ಮೂರು ಕಂಟೈನರ್ ತಪಾಸಣೆಗೆ ಒಳಪಡಿಸಲಾಗಿತ್ತು. ಆಗ 21,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹೆರಾಯಿನ್ ಪತ್ತೆಯಾಗಿತ್ತು.
ಈ ಕುರಿತು ಅಧಿಕಾರಿಗಳು ಚೆನ್ನೈ ಮೂಲದ ದಂಪತಿಯನ್ನು ಬಂಧಿಸಿದಾಗ ಅವರ ಸಂಸ್ಥೆಯು ಸರಕುಗಳನ್ನು ಆರ್ಡರ್ ಮಾಡಿದೆ ಎಂದು ಹೇಳಲಾಗಿತ್ತು. ಆದರೆ ನಿಷೇಧಿತ ವಸ್ತುವೊಂದು ತಾಲಿಬಾನ್ ನಿಯಂತ್ರಿತ ಅಫ್ಘಾನಿಸ್ತಾನದಿಂದ ಇರಾನ್ ಮಾರ್ಗವಾಗಿ ಬಂದಿರುವುದು ಸಾಕಷ್ಟು ಅನುಮಾನ ಗಳಿಗೆ ಕಾರಣವಾಗಿತ್ತು.

ನಂತರ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ಹಸ್ತಾಂತರಿಸಲಾಯಿತು. ಇದೀಗ ಮತ್ತದೇ 'ಮುಂದ್ರಾ' ಬಂದರಿನಲ್ಲಿ ನಿಷೇಧಿತ ಹೆರಾಯಿನ್ ಪತ್ತೆಯಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications