ಏಕತಾ ಪ್ರತಿಮೆ: 5.24 ಕೋಟಿ ರೂ. ಟಿಕೆಟ್ ಮಾರಾಟ ಹಣ ಕಬಳಿಕೆ ಆರೋಪ
ಅಹಮದಾಬಾದ್, ಡಿಸೆಂಬರ್ 2: ಗುಜರಾತ್ನ ನರ್ಮದಾ ಜಿಲ್ಲೆಯ ಏಕತೆಯ ಪ್ರತಿಮೆಯ ಟಿಕೆಟ್ ಮಾರಾಟದಿಂದ ಸಂಗ್ರಹಿಸಿದ 5.24 ಕೋಟಿ ರೂ ಮೊತ್ತದ ಹಣವನ್ನು ಶುಲ್ಕ ಸಂಗ್ರಹ ಸಂಸ್ಥೆಯ ಕೆಲವು ಉದ್ಯೋಗಿಗಳು ಕಬಳಿಸಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
2018ರ ಅಕ್ಟೋಬರ್ನಲ್ಲಿ ಅನಾವರಣಗೊಂಡ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆಯು ಗುಜರಾತ್ನ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿ ಬೆಳೆದಿದ್ದು, ದೇಶವಿದೇಶಗಳ ಪ್ರವಾಸಿಗರು ನದಿ ತೀರದಲ್ಲಿ ನಿರ್ಮಾಣವಾಗಿರುವ ಈ ಬೃಹತ್ ಪ್ರತಿಮೆ ವೀಕ್ಷಣೆಗೆ ತೆರಳುತ್ತಿದ್ದಾರೆ.
ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿರುವ ಏಕತೆ ಪ್ರತಿಮೆ ನಿರ್ವಹಣೆ ಸಂಸ್ಥೆಯು ಕಳೆದ ಒಂದೂವರೆ ವರ್ಷದಿಂದ ಪ್ರವೇಶ ಶುಲ್ಕದ ಹಣವನ್ನು ಸಂಗ್ರಹಿಸುತ್ತಿದ್ದು, ವಡೋದರಾದ ಖಾಸಗಿ ಬ್ಯಾಂಕ್ವೊಂದು ನೇಮಿಸಿಕೊಂಡ ನಗದು ಸಂಗ್ರಹ ಸಂಸ್ಥೆಗೆ ಟಿಕೆಟ್ ನಿರ್ವಹಣೆ ಜವಾಬ್ದಾರಿ ಹಸ್ತಾಂತರಿಸಲಾಗಿತ್ತು.

ಆದರೆ ಈ ಸಂಸ್ಥೆಯ ಕೆಲವು ಸಿಬ್ಬಂದಿ ಇದುವರೆಗೂ ಒಟ್ಟು 5,24,77,375 ರೂ. ಮೊತ್ತವನ್ನು ಏಕತಾ ಪ್ರತಿಮೆ ಪ್ರಾಧಿಕಾರದ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿಲ್ಲ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ವಾಣಿ ದುಧಾಟ್ ತಿಳಿಸಿದ್ದಾರೆ.
ನಗದು ಸಂಗ್ರಹ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಖಾಸಗಿ ಬ್ಯಾಂಕ್ನ ಮ್ಯಾನೇಜರ್ ಸೋಮವಾರ ರಾತ್ರಿ ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ವಿಚಾರದಲ್ಲಿ ಏಕತೆ ಪ್ರತಿಮೆ ಪ್ರಾಧಿಕಾರ ಭಾಗಿಯಾಗಿಲ್ಲ. ಇದು ಬ್ಯಾಂಕ್ ಮತ್ತು ಶುಲ್ಕ ಸಂಗ್ರಹಣಾ ಸಂಸ್ಥೆ ನಡುವಿನ ವಿಚಾರ. ಬ್ಯಾಂಕ್ ಈಗಾಗಲೇ ನಮ್ಮ ಖಾತೆಗಳಿಗೆ ಹಣ ಜಮೆಮಾಡಿದೆ ಎಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications