ಆರ್ ಟಿಐ ಕಾರ್ಯಕರ್ತನ ಕೊಲೆ, ಬಿಜೆಪಿ ಮಾಜಿ ಸಂಸದನಿಗೆ ಜೀವಾವಧಿ ಶಿಕ್ಷೆ
ಅಹಮದಾಬಾದ್, ಜುಲೈ 12: ಆರ್ ಟಿಐ ಕಾರ್ಯಕರ್ತ ಅಮಿತ್ ಜೆಥ್ವಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾಜಿ ಸಂಸದ ದಿನು ಸೋಲಂಕಿ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಗುಜರಾತ್ ಹೈಕೋರ್ಟಿನ ಹೊರಗಡೆ ಜುಲೈ 20, 2010ರಂದು ಅಮಿತ್ ಅವರನ್ನು ಹತ್ಯೆ ಮಾಡಲಾಗಿತ್ತು. 2009ರಿಂದ 2014ರ ಅವಧಿಯಲ್ಲಿ ಗುಜರಾತಿನ ಜುನಾಗಢ ಕ್ಷೇತ್ರದಲ್ಲಿ ಬಿಜೆಪಿ ಸಂಸದರಾಗಿದ್ದ ಸೋಲಂಕಿ ಅವರು ತಮ್ಮ ಕಸಿನ್ ಶಿವ ಸೋಲಂಕಿ ಹಾಗೂ ಇನ್ನು ಐವರು ಜೊತೆ ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶಿಕ್ಷೆ ಘೋಷಿಸಲಾಗಿದೆ.
ದಿನು ಸೋಲಂಕಿ ಅವರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಜೆಥ್ವಾ ಅವರು ಬಹಿರಂಗಪಡಿಸಿದ್ದರು. ಸೋಲಂಕಿ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿ, ಹೈಕೋರ್ಟಿನಲ್ಲಿ ವಾದಿಸಿದ್ದರು. ಏಷ್ಯಾದ ಸಿಂಹಗಳ ಧಾಮ ಗಿರ್ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಜಾಗದಲ್ಲಿ ಗಣಿಗಾರಿಕೆ ನಡೆಸಿದ ಆರೋಪವನ್ನು ಸೋಲಂಕಿ ಮೇಲೆ ಹೊರೆಸಲಾಗಿತ್ತು.

ದಿನು ಸೋಲಂಕಿ ಅವರ ಜೊತೆಗೆ ಶೈಲೇಶ್ ಪಾಂಡ್ಯ, ಬಹದೂರ್ ಸಿಂಗ್ ವಧೇರ್, ಪಂಚನ್ ದೇಸಾಯಿ, ಸಂಜಯ್ ಚೌಹಾಣ್ ಹಾಗೂ ಉದಾಜಿ ಠಾಕೂರ್ ಅವರಿಗೂ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ಪ್ರಕರಣದ ವಿಚಾರಣೆ ಹಳ್ಳ ಹಿಡಿಯುತ್ತಿದ್ದಂತೆ, ಮೃತ ಜೆಥ್ವಾ ಅವರ ತಂದೆ ಭಿಕಾಭಾಯಿ ಜೆಥ್ವಾ ಅವರು ಕಾನೂನು ಹೋರಾಟ ಮುಂದುವರೆಸಿದರು. ಘಟನೆ ನಡೆದ ವೇಳೆ ಕೋರ್ಟ್ ಆವರಣದಲ್ಲಿದ್ದ 105ಕ್ಕೂ ಅಧಿಕ ಮಂದಿ ಹತ್ಯೆಗೆ ಸಾಕ್ಷಿಯಾಗಿದ್ದರು.ಎಲ್ಲರನ್ನು ಸೋಲಂಕಿ ಅವರು ಬೆದರಿಸಿದ್ದಾರೆ ಎಂಬ ಅಂಶದ ಮೇಲೆ ವಾದಿಸಿದರು. ಕೊನೆಗೂ ಜೆಥ್ವಾ ಹತ್ಯೆ ಮಾಡಿದ ಅಪರಾಧಿಗಳಿಗೆ ಶಿಕ್ಷೆ ಸಿಕ್ಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications