ಅಹಮದಾಬಾದ್ ''ಮಿನಿ ಪಾಕಿಸ್ತಾನ'' ಎಂದ ಸಂಜಯ್, ಬಿಜೆಪಿ ಗರಂ
ಅಹಮದಾಬಾದ್, ಸೆ. 7: ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಅಹಮದಾಬಾದ್ ಮಿನಿ ಪಾಕಿಸ್ತಾನ ಇದ್ದಂತೆ ಎನ್ನುವ ಮೂಲಕ ಗುಜರಾತಿನ ಜನತೆಯ ಭಾವನೆಗೆ ಧಕ್ಕೆ ತಂದಿದ್ದಾರೆ, ತಕ್ಷಣವೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ನಟಿ ಕಂಗನಾ ರನೌತ್ ಅವರು ಮುಂಬೈ ಒಂದು ರೀತಿ ಪಾಕ್ ಆಕ್ರಮಿತ ಕಾಶ್ಮೀರವಾಗಿಬಿಟ್ಟಿದೆ ಎಂದು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಸಂಜಯ್ ಅವರು ಅಹಮಹಾಬಾದ್ ಕೂಡಾ ಮಿನಿ ಪಾಕಿಸ್ತಾನದಂತಿದೆ ಎಂದಿದ್ದರು.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು, ಮಹಾರಾಷ್ಟ್ರ ಸರ್ಕಾರ ವಿಳಂಬ ನೀತಿ ಅನುಸರಿಸಿದೆ ಎಂದು ಆಡಳಿತ ಪಕ್ಷದ ವಿರುದ್ಧ ಕಂಗನಾ ಕಿಡಿಕಾರಿದ್ದರು. ಕಂಗನಾ ಹೇಳಿಕೆಯನ್ನು ಖಂಡಿಸುತ್ತಾ ಬಂದಿರುವ ಸಂಜಯ್ ಮಾತನಾಡಿ, ಆ ಯುವತಿ ಮುಂಬೈ ಹಾಗೂ ಮಹಾರಾಷ್ಟ್ರದ ಕ್ಷಮೆಯಾಚಿಸಬೇಕು, ಮುಂಬೈಯನ್ನು ಮಿನಿ ಪಾಕಿಸ್ತಾನ ಎಂದು ಕರೆದಿದ್ದಾಳೆ. ಇದನ್ನೇ ಆಕೆ ಅಹಮದಾಬಾದ್ ಗೂ ಕೂಡಾ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು.

ಸಂಜಯ್ ಅವರ ಹೇಳಿಕೆ ಖಂಡಿಸಿರುವ ಗುಜರಾತ್ ಬಿಜೆಪಿ ವಕ್ತಾರ ಭರತ್ ಪಾಂಡ್ಯ ಅವರು ಸೇನಾ ಮುಖಂಡ ಅಹಮದಾಬಾದ್ ನಗರಕ್ಕೆ ಅಪಮಾನ ಮಾಡಿದ್ದಾರೆ. ಗುಜರಾತ್, ಅಹಮಹಾಬಾದ್ ಹಾಗೂ ಅಂದವಾಡಿಸ್ ಕ್ಷಮೆಯಾಚಬೇಕು ಎಂದಿದ್ದಾರೆ.
ಗಾಂಧೀಜಿ, ಸರ್ದಾರ್ ಪಟೇಲ್ ಅವರ ನಾಡು ಗುಜರಾತ್ ಬಗ್ಗೆ ಈ ರೀತಿ ಹೇಳಿಕೆ ನೀಡುವುದನ್ನು ಶಿವಸೇನೆ ನಿಲ್ಲಿಸಬೇಕು. ಪಟೇಲ್ ಅವರು ದೇಶದಲ್ಲಿ ಏಕತೆ ರೂಪಿಸಿದವರು. ಸುಮಾರು 562 ರಾಜ್ಯಗಳನ್ನು ಒಗ್ಗೂಡಿಸಿ ಅಖಂಡ ಭಾರತವನ್ನು ನಮ್ಮ ಮುಂದಿಟ್ಟಿದ್ದಾರೆ. ಪಾಕಿಸ್ತಾನದ ಕೈ ಸೇರಬಹುದಾಗಿದ್ದ ಜುನಾಗಢ್ ಹಾಗ್ ಹಾಗೂ ಹೈದರಾಬಾದ್ ಕೂಡಾ ಭಾರತದಲ್ಲೇ ಉಳಿಯುವಂತೆ ಮಾಡಿದ್ದನ್ನು ಮರೆಯುವಂತಿಲ್ಲ ಎಂದು ಪಾಂಡ್ಯ ಹೇಳಿದರು.
ಪಟೇಲ್ ಅವರ ಕನಸಿನಂತೆ ಆರ್ಟಿಕಲ್ 370 ರದ್ದಾಗಿದೆ. ಕಾಶ್ಮೀರದಲ್ಲಿ ಹೊಸ ಆಡಳಿತ ಬಂದಿದೆ. ದೇಶದ ಜನತೆಯ ಆಶಯದಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಶಾಂತಿ ನೆಲೆಸುವಂತೆ ಮಾಡಿದ್ದಾರೆ. ಅವರಿಬ್ಬರೂ ಗುಜರಾತಿನವರು ಎಂಬುದನ್ನು ಮರೆಯಬೇಡಿ ಎಂದು ಸಂಜಯ್ ರನ್ನು ಎಚ್ಚರಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications