Get Updates
Get notified of breaking news, exclusive insights, and must-see stories!

ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್‌ಗೆ ಸಿಹಿಸುದ್ದಿ ಕೊಟ್ಟ ಸುಪ್ರೀಂಕೋರ್ಟ್

ನವದೆಹಲಿ, ಏಪ್ರಿಲ್ 12: 2015 ರ ಪಾಟೀದಾರ್ ಚಳವಳಿಯ ಸಮಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧಿ ಎನಿಸಿರುವ ಪಾಟೀದಾರ್ ಸಮುದಾಯದ ನಾಯಕ, ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್‌ಗೆ ಸುಪ್ರೀಂಕೋರ್ಟ್ ನಿಂದ ಮಂಗಳವಾರ ಶುಭ ಸುದ್ದಿ ಸಿಕ್ಕಿದೆ. ಮೆಹ್ಸಾನಾ ದಂಗೆ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಹಾರ್ದಿಕ್ ಪಟೇಲ್ ದೋಷಿ ಎಂದು ನೀಡಲಾಗಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ

ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಶಿಕ್ಷೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಸ್ ಎ ನಜೀರ್ ಮತ್ತು ವಿಕ್ರಮ್ ನಾಥ್ ಅವರ ಪೀಠವು, ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂಕ್ತವಾದ ಪ್ರಕರಣವಾಗಿದೆ ಎಂದು ಹೇಳಿದೆ.

ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ಜಾಮ್ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಳಿಯಬೇಕಿದ್ದ ಹಾರ್ದಿಕ್ ಪಟೇಲ್ ಅವರಿಗೆ ನ್ಯಾಯಾಲಯವು ತಡೆಯೊಡ್ಡಿತ್ತು. ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ವಿಸ್ನಗರ್ ನ್ಯಾಯಾಲಯವು ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ಪರಿಗಣಿಸಿ, 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಗುಜರಾತ್ ಹೈಕೋರ್ಟಿನಲ್ಲಿ ಹಾರ್ದಿಕ್ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಮೇಲ್ಮನವಿ ತಿರಸ್ಕೃತಗೊಂಡಿತ್ತು. ಜನಪ್ರತಿನಿಧಿಗಳ ಕಾಯ್ದೆ 1951ರ ಅನ್ವಯ ಅಪರಾಧಿ ಎನಿಸಿರುವುದರಿಂದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ

SC stays conviction of Congress leader Hardik Patel in rioting case

ಆದರೆ, ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ಪಟೇಲ್ ಪರ ವಾದಿಸಿ, ನನ್ನ ಕಕ್ಷಿದಾರರನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿಸದಿರುವುದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು.

ಹಾರ್ದಿಕ್ ಪಟೇಲ್ 2017 ರ ಡಿಸೆಂಬರ್ ನಲ್ಲಿ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೇ ಸ್ಪರ್ಧಿಸಬೇಕಿತ್ತು. ಆದರೆ ಚುನಾವಣೆಗೆ ಸ್ಪರ್ಧಿಸಲು ಬೇಕಿದ್ದ ಕನಿಷ್ಠ ವಯೋಮಿತಿ(25 ವರ್ಷ)ಯನ್ನು ಅವರು ಮೀರಿರದ ಕಾರಣ ಅವರು ಚುನಾವನೆಗೆ ಸ್ಪರ್ಧಿಸಿರಲಿಲ್ಲ.

SC stays conviction of Congress leader Hardik Patel in rioting case

2015 ರಲ್ಲಿ ನಡೆದ ಪಟೇಲ್ ಸಮುದಾಯದ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ಹಲವು ಹಿಂಸಾಚಾರ ಪ್ರಕರಣಗಳು ನಡೆದಿದ್ದವು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಅವರ ವಿಸ್ನಗರ ಕಚೇರಿಯನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಅವರನ್ನು ದೋಷಿ ಎಂದು ನ್ಯಾಯಾಲಯ ಪರಿಗಣಿಸಿತ್ತು.

2019 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಗುಜರಾತ್ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಪಟೇಲ್ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಪಟೇಲ್ ಅವರು ಜುಲೈ 25, 2018 ರಂದು ವಿಸ್ನಗರದ ಮೆಹ್ಸಾನಾ ಸೆಷನ್ಸ್ ನ್ಯಾಯಾಲಯವು ನೀಡಿದ ಶಿಕ್ಷೆಯ ಆದೇಶವನ್ನು ಅಮಾನತುಗೊಳಿಸಲು ನಿರ್ದೇಶನವನ್ನು ಕೋರಿದ್ದರು. ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿ ಮಾರ್ಚ್ 29ರ ಹೈಕೋರ್ಟ್‌ನ ಆದೇಶದ ಸಿಂಧುತ್ವವನ್ನು ಅವರು ಪ್ರಶ್ನಿಸಿದ್ದರು.

"ವಾಸ್ತವತೆಗಳು ಮತ್ತು ಸಂದರ್ಭಗಳನ್ನು ಪರಿಗಣಿಸಿ, ಉಚ್ಚ ನ್ಯಾಯಾಲಯವು ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂಕ್ತವಾದ ಪ್ರಕರಣ ಎಂದು ನಾವು ಭಾವಿಸುತ್ತೇವೆ. ಈ ಮೂಲಕ ಮೇಲ್ಮನವಿಗಳು ಮುಗಿಯುವವರೆಗೆ ಶಿಕ್ಷೆಗೆ ತಡೆ ನೀಡಲಾಗಿದೆ. ಅದರಂತೆ ನಿರ್ಧರಿಸಿದೆ." ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+