2002ರ ಗೋಧ್ರಾ ರೈಲಿಗೆ ಬೆಂಕಿಹಚ್ಚಿದ ಕೇಸ್,ಇಬ್ಬರಿಗೆ ಜೀವಾವಧಿ ಶಿಕ್ಷೆ
ಅಹಮದಾಬಾದ್, ಆಗಸ್ಟ್ 27: 2002ರಲ್ಲಿ ಕರಸೇವಕರಿದ್ದ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ವಿಶೇಷ ನ್ಯಾಯಾಲಯವು ಇಂದು ಶಿಕ್ಷೆ ಪ್ರಕಟಿಸಿದೆ. ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ಸರಬಮತಿ ಎಕ್ಸ್ ಪ್ರೆಸ್ ನ ಎರಡು ಕೋಚ್ ಗಳಿಗೆ ಬೆಂಕಿ ಹಚ್ಚಿದ್ದರಿಂದ 59ಕರಸೇವಕರು ಜೀವಂತವಾಗಿ ಬೆಂಕಿಗೆ ಆಹುತಿಯಾಗಿದ್ದರು. ಪ್ರಕರಣ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯದ ಜಡ್ಜ್ ಎಚ್ ಸಿ ವೋರಾ ಅವರು ಮೂವರನ್ನು ಈ ಪ್ರಕರಣದಿಂದ ಖುಲಾಸೆಗೊಳಿಸಿ, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದರು.
ಫರೂಕ್ ಭಾನಾ ಹಾಗೂ ಇಮ್ರಾನ್ ಶೇರು ಅವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಹುಸೇನ್ ಸುಲೇಮಾನ್ ಮೋಹನ್, ಕಾಸಂ ಭಾಮೆಡಿ, ಫಾರುಖ್ ಧಾಂಟಿಯಾ ಅವರನ್ನು ಖುಲಾಸೆಗೊಳಿಸಲಾಗಿದೆ.

ಈ ಪ್ರಕರಣದಲ್ಲಿ 31 ಜನರನ್ನು ಅಪರಾಧಿಗಲು ಎಂದು ಮಾರ್ಚ್ 1,2011ರಲ್ಲಿ ಘೋಷಿಸಲಾಗಿದೆ. ಈ ಪೈಕಿ 11 ಮಂದಿಗೆ ಗಲ್ಲುಶಿಕ್ಷೆ ಹಾಗೂ 20 ಮಂದಿಗೆ ಜೀವಾವಧಿ ಶಿಕ್ಷೆ ಪ್ರಟಿಸಲಾಗಿದೆ.
ಆದರೆ, ಅಕ್ಟೋಬರ್ 2017ರಲ್ಲಿ ಗುಜರಾತ್ ಹೈಕೋರ್ಟ್, 11 ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಆದೇಶ ಹೊರಡಿಸಿತು. ವಿಶೇಷ ನ್ಯಾಯಾಲಯ ನೀಡಿದ್ದ 20 ಜನರಿಗೆ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿಯಲಾಯಿತು.
2002ರ ಫೆಬ್ರವರಿ 27ರಂದು 59ಕರಸೇವಕರು ರೈಲಿನಲ್ಲಿ ಹತ್ಯೆಗೀಡಾದ ಬಳಿಕ ಕೋಮುಗಲಭೆ ಆರಂಭವಾಯಿತು. ಗುಜರಾತಿನ ಇತಿಹಾಸದಲ್ಲಿ ಕರಾಳ ದಿನವಾಗಿದ್ದು, ಸುಮಾರು 1,000ಕ್ಕೂ ಅಧಿಕ ಮಂದಿಯನ್ನು ಬಲಿಪಡೆಯಿತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications