ಸರ್ದಾರ್ ಪಟೇಲ್ ಸ್ಮಾರಕ ವೀಕ್ಷಣೆಗೆ ಹೆಲಿಕಾಪ್ಟರ್ ಸೌಲಭ್ಯ ಆರಂಭ
ಅಹ್ಮದಾಬಾದ್ (ಗುಜರಾತ್), ಡಿಸೆಂಬರ್ 24: ಗುಜರಾತ್ ನ ಕೇವದಿಯಾದಲ್ಲಿರುವ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ರ ಅತಿ ದೊಡ್ಡ ಪ್ರತಿಮೆಯನ್ನು ನಾನಾ ಆಯಾಮಗಳಿಂದ ವೀಕ್ಷಿಸಲು ಅನುಕೂಲ ಆಗುವಂತೆ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಹತ್ತು ನಿಮಿಷಗಳ ಈ ಹೆಲಿಕಾಪ್ಟರ್ ರೈಡ್ ಗೆ ಭಾನುವಾರ ಚಾಲನೆ ಸಿಕ್ಕಿದೆ.
ಅಮೆರಿಕದ ಸ್ವಾತಂತ್ರ್ಯ ಪ್ರತಿಮೆಗಿಂತ ಎರಡು ಪಟ್ಟು ದೊಡ್ಡದಾದ ಈ ಪ್ರತಿಮೆಯ ವೀಕ್ಷಣೆಯನ್ನು ಹೆಲಿಕಾಪ್ಟರ್ ಸೇವೆ ಆರಂಭವಾದ ನಂತರ ಐವತ್ತೊಂಬತ್ತು ಸಂದರ್ಶಕರು ಹಾಗೂ ಮಾಧ್ಯಮದ ಆರು ಮಂದಿ ಪ್ರತಿನಿಧಿಗಳು ಬಳಸಿದ್ದಾರೆ. ಹತ್ತು ನಿಮಿಷದ ವಿಹಾರಕ್ಕಾಗಿ 2900 ರುಪಾಯಿ ದರ ನಿಗದಿ ಮಾಡಲಾಗಿದೆ.
ಜಗತ್ತಿನ ಅತಿದೊಡ್ಡ ಪ್ರತಿಮೆ ಎಂಬ ಅಗ್ಗಳಿಕೆ ಇರುವ ಈ ಪುತ್ಥಳಿಯನ್ನು ಕಳೆದ ಅಕ್ಟೋಬರ್ 31ನೇ ತಾರೀಕು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದರು. ಆ ನಂತರ ಈ ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಉದ್ಘಾಟನೆಯಾದ ಮೊದಲ ಹನ್ನೊಂದು ದಿನವೇ ಒಂದು ಲಕ್ಷದ ಮೂವತ್ತು ಸಾವಿರ ಮಂದಿ ಇಲ್ಲಿಗೆ ಭೇಟಿ ನೀಡಿದ್ದರು.

ಗುಜರಾತ್ ನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಈ ಪುತ್ಥಳಿ ಕೂಡ ಒಂದಾಗಿದೆ. ಈ ಏಕತಾ ವಿಗ್ರಹದ ಬಳಿ ಎಲ್ಲ ರಾಜ್ಯಗಳವರು ಅತಿಥಿ ಗೃಹಗಳನ್ನು ನಿರ್ಮಿಸುವಂತೆ ಆಯಾ ರಾಜ್ಯದ ಮುಖ್ಯಮಂತ್ರಿಹಳಿಗೆ ಗುಜರಾತ್ ಸರಕಾರ ಪತ್ರ ಬರೆದಿದೆ. 3 ಸಾವಿರ ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಗುಜರಾತ್ ಸರಕಾರದ ಪ್ರಕಾರ ನಿತ್ಯವೂ ಇಲ್ಲಿಗೆ ಸರಾಸರಿ 15 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications