ತ್ಯಾಜ್ಯ ವಿಲೇವಾರಿ ಟ್ರಕ್ನಲ್ಲಿ ವೆಂಟಿಲೇಟರ್ ಸಾಗಿಸಿದ ಪಾಲಿಕೆ!
ಅಹಮದಾಬಾದ್, ಏಪ್ರಿಲ್ 6: ದೇಶದಲ್ಲಿ ಕೋವಿಡ್ ಸೋಂಕು ಹರಡಲು ಆರಂಭವಾದಾಗ ಹೆಚ್ಚು ಚರ್ಚೆಯಾಗಿದ್ದು, ವೆಂಟಿಲೇಟರ್ಗಳ ಲಭ್ಯತೆ ಬಗ್ಗೆ. ಈಗ ಪ್ರಕರಣಗಳ ಸಂಖ್ಯೆ ಮತ್ತೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಅನೇಕ ಕಡೆ ವೆಂಟಿಲೇಟರ್ಗಳ ಕೊರತೆ ಸಮಸ್ಯೆಯೇನೂ ಬಗೆಹರಿದಿಲ್ಲ. ವೆಂಟಿಲೇಟರ್ ಅಗತ್ಯವಿರುವ ಆಸ್ಪತ್ರೆಗಳಿಗೆ ಬೇರೆ ಆಸ್ಪತ್ರೆಗಳಿಂದ ಸರಬರಾಜು ಮಾಡಲಾಗುತ್ತಿದೆ. ಆದರೆ ಪ್ರಧಾನಿ ತವರೂರು ಗುಜರಾತ್ನಲ್ಲಿ ಕಸ ಸಾಗಿಸುವ ಟ್ರಕ್ನಲ್ಲಿ ವೆಂಟಿಲೇಟರ್ಗಳನ್ನು ಸಾಗಿಸಲಾಗಿದೆ.
ಗುಜರಾತ್ನಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣ 3,000ಕ್ಕೆ ತಲುಪಿದೆ. ಇದರ ನಡುವೆ ರಾಜ್ಯದಲ್ಲಿ ವೆಂಟಿಲೇಟರ್ ಕೊರತೆ ಉಂಟಾಗಿದೆ. ಸೂರತ್ ಜಿಲ್ಲೆಯಲ್ಲಿ ಆಸ್ಪತ್ರೆಯೊಂದಕ್ಕೆ 34 ವೆಂಟಿಲೇಟರ್ಗಳನ್ನು ತ್ಯಾಜ್ಯ ವಿಲೇವಾರಿ ಟ್ರಕ್ನಲ್ಲಿ ಪೂರೈಕೆ ಮಾಡಿರುವುದು ಟೀಕೆಗೆ ಒಳಗಾಗಿದೆ.

ವಲ್ಸದ್ನಿಂದ ಸೂರತ್ಗೆ 34 ವೆಂಟಿಲೇಟರ್ಗಳನ್ನು ಕಳುಹಿಸುವಂತೆ ಸರ್ಕಾರ ಆದೇಶಿಸಿತ್ತು. ವೆಂಟಿಲೇಟರ್ ಕೊರತೆ ನೀಗಿಸಲು ಈ ಸೂಚನೆ ನೀಡಲಾಗಿತ್ತು. ಈ ಆದೇಶದ ಬಳಿಕ ಸೂರತ್ ನಗರ ಪಾಲಿಕೆಯು ವಲ್ಸದ್ನಿಂದ ವೆಂಟಿಲೇಟರ್ಗಳನ್ನು ತರಲು ತ್ಯಾಜ್ಯ ವಿಲೇವಾರಿ ಟ್ರಕ್ ಅನ್ನು ಕಳುಹಿಸಿತ್ತು.
In the wake of the Covid-19 spike in Gujarat, 34 ventilators were transported to hospitals in the Surat district in a garbage truck to mitigate the shortage! pic.twitter.com/9rFeuRP1Vz
— Madhav Mantri (@madhavmantri) April 6, 2021
ಸೂರತ್ ನಗರ ಪಾಲಿಕೆಯು ಕಳುಹಿಸಿದ ತ್ಯಾಜ್ಯ ವಿಲೇವಾರಿ ಟ್ರಕ್ನಲ್ಲಿ ವೆಂಟಿಲೇಟರ್ಗಳನ್ನು ಕಳುಹಿಸಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ವಲ್ಸದ್ ಡಿಸಿ ಆರ್ ಆರ್ ರಾವಲ್ ತಿಳಿಸಿದ್ದಾರೆ.
ಗುಜರಾತ್ನಲ್ಲಿ ಸೋಮವಾರ ಮೊದಲ ಬಾರಿಗೆ ದೈನಂದಿ ಕೋವಿಡ್ ಪ್ರಕರಣ 3,000ದ ಗಡಿ ದಾಟಿದೆ. 3,160 ಹೊಸ ಪ್ರಕರಣಗಳೊಂದಿಗೆ ಒಟ್ಟು ಪ್ರಕರಣಗಳು 3,21,598ಕ್ಕೆ ಏರಿಕೆಯಾಗಿದೆ.
Recommended Video
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications