10 ವರ್ಷಗಳಿಂದ ಕೋಣೆಯಲ್ಲೇ ಬಂಧಿಯಾದ ಒಡಹುಟ್ಟಿದವರು
ಅಹಮದಾಬಾದ್, ಡಿಸೆಂಬರ್ 29: ಸುಮಾರು ಹತ್ತು ವರ್ಷಗಳಿಂದ ಒಂದೇ ಕೋಣೆಯಲ್ಲಿ ಇಬ್ಬರು ಸಹೋದರರು, ಸಹೋದರಿ ಬಂಧಿಯಾಗಿರುವ ಹೃದಯ ವಿದ್ರಾವಕ ಸಂಗತಿ ಗುಜರಾತ್ ನ ರಾಜಾಕೋಟ್ ಎಂಬಲ್ಲಿ ಬೆಳಕಿಗೆ ಬಂದಿದೆ.
30 ರಿಂದ 42 ವಯೋಮಾನದ ಈ ಸಹೋದರಿ ಸಹೋದರರು ಸುಮಾರು ಹತ್ತು ವರ್ಷಗಳ ಕಾಲ ಹೊರ ಪ್ರಪಂಚವನ್ನೇ ಕಂಡಿಲ್ಲ. ಸೂರ್ಯನ ಬೆಳಕು ಬೀಳದ ಕೋಣೆಯಲ್ಲೇ ಬಂಧಿಯಾಗಿರುವ ಇವರನ್ನು ಡಿ.27ರಂದು ಸ್ವಯಂ ಸೇವಾ ಸಂಸ್ಥೆ ಸಾಥಿ ರಕ್ಷಣೆ ಮಾಡಿದೆ. ಈ ಎಲ್ಲರೂ ಉನ್ನತ ಶಿಕ್ಷಣ ಪಡೆದವರಾಗಿದ್ದು, ವಿಶ್ವವಿದ್ಯಾಲಯದಿಂದ ಪದವಿ ಪಡೆದುಕೊಂಡವರಾಗಿದ್ದಾರೆ.
ಆದರೆ ಏಕೆ ಹೀಗೆ ಕೋಣೆಯಲ್ಲಿ ಬಂಧಿಯಾಗಿದ್ದಾರೆ ಎಂಬ ಕುರಿತು ಸ್ಪಷ್ಟ ಮಾಹಿತಿ ದೊರೆತಿಲ್ಲ.
42 ವರ್ಷದ ಅಮರಿಶಾ ಮೆಹ್ತಾ ಬಿಎ, ಎಲ್ ಎಲ್ ಬಿ ಪದವಿ ಪಡೆದಿದ್ದರು. 39 ವರ್ಷದ ಮೇಘನಾ ಮೆಹ್ತಾ ಮನಃಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 30 ವರ್ಷದ ಭಾವೇಶ್ ಮೆಹ್ತಾ ಕೂಡ ಬಿಎ ಪದವಿ ಪಡೆದಿದ್ದರು. ಒಂದೇ ಕೋಣೆಯಲ್ಲಿ ಹಲವು ವರ್ಷಗಳಿಂದ ಇವರೆಲ್ಲರೂ ಬಂಧಿತರಾಗಿದ್ದು, ಅಪೌಷ್ಟಿಕತೆಯಿಂದ ಅಸ್ವಸ್ಥರಾಗಿದ್ದರು ಎಂದು ತಿಳಿದುಬಂದಿದೆ. ಇಡೀ ಕೋಣೆಯು ಕೊಳಕಾಗಿ ಗಬ್ಬು ನಾರುತ್ತಿದ್ದು, ಇಂಥ ವಾತಾವರಣದಲ್ಲಿ ಮೂವರು ಬದುಕುತ್ತಿದ್ದರು ಎಂದು ಸ್ವಯಂಸೇವಾ ಸಂಸ್ಥೆ ಸದಸ್ಯರು ತಿಳಿಸಿದ್ದಾರೆ.

ತಮ್ಮ ತಾಯಿ ತೀರಿಕೊಳ್ಳುತ್ತಿದ್ದಂತೆ ತಾವೇ ಪ್ರಪಂಚದೊಂದಿಗೆ ಸಂಪರ್ಕ ಕಡಿದುಕೊಂಡು ಮೂವರೂ ಸ್ವಯಂ ಬಂಧನಕ್ಕೆ ಒಳಗಾದರು ಎಂದು ತಂದೆ ನವೀನ್ ತಿಳಿಸಿದ್ದು, ದಿನ ತಾವೇ ಊಟ ಇಟ್ಟು ಹೋಗುತ್ತಿದ್ದುದಾಗಿ ತಿಳಿಸಿದ್ದಾರೆ. ಆದರೆ ಈ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications