'ಮೋದಿ ನಾಯಕತ್ವದಲ್ಲಿ ಭಾರತ ತಾಳ್ಮೆಯಿಂದ 2 ನೇ ಕೋವಿಡ್ ಅಲೆ ವಿರುದ್ದ ಹೋರಾಡಿದೆ': ಅಮಿತ್ ಶಾ
ಅಹಮದಾಬಾದ್, ಜೂ. 03: "ಕೋವಿಡ್ ಸಾಂಕ್ರಾಮಿಕದಿಂದ ಎದುರಿಸುತ್ತಿರುವ ಸವಾಲುಗಳ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾಳ್ಮೆಯಿಂದ ಹೋರಾಡಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಹಮದಾಬಾದ್ನಲ್ಲಿ ಒಂಬತ್ತು ಆಮ್ಲಜನಕ ಸ್ಥಾವರಗಳ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರು, "ಎರಡನೇ ಅಲೆಯಲ್ಲಿನ ಅತಿದೊಡ್ಡ ಸವಾಲುಗಳಲ್ಲಿ ಒಂದಾದ ಆಮ್ಲಜನಕದ ಬೇಡಿಕೆಯಲ್ಲಿನ ಹತ್ತು ಪಟ್ಟು ಹೆಚ್ಚಳವನ್ನು ನಿವಾರಿಸಲು ಸರ್ಕಾರ ಕೈಗೊಂಡ ಹಲವಾರು ಕ್ರಮಗಳನ್ನು ಕೈಗೊಂಡಿದೆ" ಎಂದಿದ್ದಾರೆ.
"ಸಾಮಾನ್ಯ ಪರಿಸ್ಥಿತಿಗಳಲ್ಲಿ, ದೇಶವು ಸುಮಾರು 1000 ಮೆ.ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು. ಒಂದು ತಿಂಗಳಲ್ಲಿ ಬೇಡಿಕೆ 10,000 ಮೆ.ಟನ್.ಗೆ ಏರಿತು. ಈ ಬೇಡಿಕೆಯು 10 ಪಟ್ಟು ಹೆಚ್ಚಳವಾಗಿತ್ತು. ಇದನ್ನು ಪೂರೈಸುವುದು ದೊಡ್ಡ ಸವಾಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರ ಮತ್ತು ರಾಜ್ಯವು ಈ ಸವಾಲನ್ನು ದೃಢವಾಗಿ ಎದುರಿಸಿದೆ" ಎಂದು ಶ್ಲಾಘಿಸಿದ್ದಾರೆ.

"ಕೈಗಾರಿಕಾ ಆಮ್ಲಜನಕದ ಉತ್ಪಾದನೆಯನ್ನು ದೇಶದಾದ್ಯಂತದ ಸ್ಥಾವರಗಳಲ್ಲಿ ಮಾಡಲಾಗುತ್ತಿತ್ತು. ಆದರೆ ಬಳಿಕ ಎಲ್ಲಾ ಸ್ಥಾವರಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡಲಾಯಿತು. ಕ್ರಯೋಜೆನಿಕ್ ಟ್ಯಾಂಕರ್ಗಳು ದೇಶದಲ್ಲಿ ಕಡಿಮೆ ಇದ್ದವು. ನಾವು ವಿದೇಶಗಳಿಂದ ಅದನ್ನು ಆಮದು ಮಾಡಿಕೊಂಡೆವು. ರೈಲುಗಳಲ್ಲಿ ಆಮ್ಲಜನಕವನ್ನು ಸಾಗಿಸಲಾಯಿತು. ಸುಮಾರು 15,000 ಮೆ.ಟನ್ ಆಮ್ಲಜನಕ ರೈಲುಗಳಲ್ಲಿ ರವಾನೆ ಮಾಡಲಾಗಿದೆ" ಎಂದು ವಿವರಿಸಿದ್ದಾರೆ.
"ಮೊದಲ ಅಲೆಯ ನಂತರ, 162 ಪಿಎಸ್ಎ ಸ್ಥಾವರಗಳನ್ನು ಪಿಎಂ ಕೇರ್ಸ್ ನಿಧಿಯಿಂದ ಪ್ರಧಾನಿ ಅನುಮೋದಿಸಿದ್ದಾರೆ. ಇದರೊಂದಿಗೆ ಇನ್ನೂ 100 ಪಿಎಸ್ಎ ಸ್ಥಾವರಗಳನ್ನು ಇತರ ಸಚಿವಾಲಯಗಳು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 300 ಸ್ಥಾವರ ಕಾಮಗಾರಿಗಳನ್ನು ಸಹ ಪ್ರಾರಂಭಿಸಲಾಗುವುದು" ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲೇ ಅಮಿತ್ ಶಾ, ಸಶಸ್ತ್ರ ಪಡೆ, ರೈಲ್ವೆ ಮತ್ತು ವಿಜ್ಞಾನಿಗಳ ಪ್ರಯತ್ನಗಳನ್ನು ಶ್ಲಾಘಿಸಿ ಧನ್ಯವಾದ ಹೇಳಿದ್ದಾರೆ. ಅಮಿತ್ ಶಾ ಉದ್ಘಾಟಿಸಿದ ಒಂಬತ್ತು ಆಮ್ಲಜನಕ ಘಟಕಗಳನ್ನು ವಲ್ಲಭ ಯುವ ಸಂಘಟನೆ ನಿರ್ವಹಿಸಲಿದೆ. ವರ್ಚುವಲ್ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡಾ ಉಪಸ್ಥಿತರಿದ್ದರು.
(ಒನ್ಇಂಡಿಯಾ ಸುದ್ದಿ)
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications