'ಮೋದಿ ನಾಯಕತ್ವದಲ್ಲಿ ಭಾರತ ತಾಳ್ಮೆಯಿಂದ 2 ನೇ ಕೋವಿಡ್ ಅಲೆ ವಿರುದ್ದ ಹೋರಾಡಿದೆ': ಅಮಿತ್ ಶಾ
ಅಹಮದಾಬಾದ್, ಜೂ. 03: "ಕೋವಿಡ್ ಸಾಂಕ್ರಾಮಿಕದಿಂದ ಎದುರಿಸುತ್ತಿರುವ ಸವಾಲುಗಳ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾಳ್ಮೆಯಿಂದ ಹೋರಾಡಿದೆ" ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಹಮದಾಬಾದ್ನಲ್ಲಿ ಒಂಬತ್ತು ಆಮ್ಲಜನಕ ಸ್ಥಾವರಗಳ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರು, "ಎರಡನೇ ಅಲೆಯಲ್ಲಿನ ಅತಿದೊಡ್ಡ ಸವಾಲುಗಳಲ್ಲಿ ಒಂದಾದ ಆಮ್ಲಜನಕದ ಬೇಡಿಕೆಯಲ್ಲಿನ ಹತ್ತು ಪಟ್ಟು ಹೆಚ್ಚಳವನ್ನು ನಿವಾರಿಸಲು ಸರ್ಕಾರ ಕೈಗೊಂಡ ಹಲವಾರು ಕ್ರಮಗಳನ್ನು ಕೈಗೊಂಡಿದೆ" ಎಂದಿದ್ದಾರೆ.
"ಸಾಮಾನ್ಯ ಪರಿಸ್ಥಿತಿಗಳಲ್ಲಿ, ದೇಶವು ಸುಮಾರು 1000 ಮೆ.ಟನ್ ಆಮ್ಲಜನಕವನ್ನು ಉತ್ಪಾದಿಸುತ್ತಿತ್ತು. ಒಂದು ತಿಂಗಳಲ್ಲಿ ಬೇಡಿಕೆ 10,000 ಮೆ.ಟನ್.ಗೆ ಏರಿತು. ಈ ಬೇಡಿಕೆಯು 10 ಪಟ್ಟು ಹೆಚ್ಚಳವಾಗಿತ್ತು. ಇದನ್ನು ಪೂರೈಸುವುದು ದೊಡ್ಡ ಸವಾಲಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೇಂದ್ರ ಮತ್ತು ರಾಜ್ಯವು ಈ ಸವಾಲನ್ನು ದೃಢವಾಗಿ ಎದುರಿಸಿದೆ" ಎಂದು ಶ್ಲಾಘಿಸಿದ್ದಾರೆ.

"ಕೈಗಾರಿಕಾ ಆಮ್ಲಜನಕದ ಉತ್ಪಾದನೆಯನ್ನು ದೇಶದಾದ್ಯಂತದ ಸ್ಥಾವರಗಳಲ್ಲಿ ಮಾಡಲಾಗುತ್ತಿತ್ತು. ಆದರೆ ಬಳಿಕ ಎಲ್ಲಾ ಸ್ಥಾವರಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಮಾಡಲಾಯಿತು. ಕ್ರಯೋಜೆನಿಕ್ ಟ್ಯಾಂಕರ್ಗಳು ದೇಶದಲ್ಲಿ ಕಡಿಮೆ ಇದ್ದವು. ನಾವು ವಿದೇಶಗಳಿಂದ ಅದನ್ನು ಆಮದು ಮಾಡಿಕೊಂಡೆವು. ರೈಲುಗಳಲ್ಲಿ ಆಮ್ಲಜನಕವನ್ನು ಸಾಗಿಸಲಾಯಿತು. ಸುಮಾರು 15,000 ಮೆ.ಟನ್ ಆಮ್ಲಜನಕ ರೈಲುಗಳಲ್ಲಿ ರವಾನೆ ಮಾಡಲಾಗಿದೆ" ಎಂದು ವಿವರಿಸಿದ್ದಾರೆ.
"ಮೊದಲ ಅಲೆಯ ನಂತರ, 162 ಪಿಎಸ್ಎ ಸ್ಥಾವರಗಳನ್ನು ಪಿಎಂ ಕೇರ್ಸ್ ನಿಧಿಯಿಂದ ಪ್ರಧಾನಿ ಅನುಮೋದಿಸಿದ್ದಾರೆ. ಇದರೊಂದಿಗೆ ಇನ್ನೂ 100 ಪಿಎಸ್ಎ ಸ್ಥಾವರಗಳನ್ನು ಇತರ ಸಚಿವಾಲಯಗಳು ಪ್ರಾರಂಭಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ 300 ಸ್ಥಾವರ ಕಾಮಗಾರಿಗಳನ್ನು ಸಹ ಪ್ರಾರಂಭಿಸಲಾಗುವುದು" ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲೇ ಅಮಿತ್ ಶಾ, ಸಶಸ್ತ್ರ ಪಡೆ, ರೈಲ್ವೆ ಮತ್ತು ವಿಜ್ಞಾನಿಗಳ ಪ್ರಯತ್ನಗಳನ್ನು ಶ್ಲಾಘಿಸಿ ಧನ್ಯವಾದ ಹೇಳಿದ್ದಾರೆ. ಅಮಿತ್ ಶಾ ಉದ್ಘಾಟಿಸಿದ ಒಂಬತ್ತು ಆಮ್ಲಜನಕ ಘಟಕಗಳನ್ನು ವಲ್ಲಭ ಯುವ ಸಂಘಟನೆ ನಿರ್ವಹಿಸಲಿದೆ. ವರ್ಚುವಲ್ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡಾ ಉಪಸ್ಥಿತರಿದ್ದರು.
(ಒನ್ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications