ವಿಡಿಯೋ: ಏಕತಾ ಪ್ರತಿಮೆ ಅನಾವರಣದ ಅಮೋಘ ಕ್ಷಣಗಳು
Recommended Video

ಅಹ್ಮದಾಬಾದ್, ಅಕ್ಟೋಬರ್ 31: ನರ್ಮದಾ ನದಿಗೆ ಕಟ್ಟಲಾದ ಸರ್ದಾರ್ ಸರೋವರ್ ಅಣೆಕಟ್ಟಿನ ಮೇಲೆ ಮೀಟರ್ ಎತ್ತರದಲ್ಲಿ ತಲೆ ಎತ್ತಿನಿಂತ ಆ ಭವ್ಯ ಮೂರ್ತಿಯನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲದು!
ಸ್ವಾತಂತ್ರ್ಯಾನಂತರ ಭಾರತದಲ್ಲಿ ಹರಿದುಹಂಚಿ ಹೋಗಿದ್ದ ರಾಜಮನೆತನಗಳನ್ನು ಒಗ್ಗೂಡಿಸಿ, ಅವರನ್ನೆಲ್ಲ ಭಾರತ ಎಂಬ ಒಂದೇ ಸೂರಿನಡಿ ತಂದ ಕೀರ್ತಿ ಸರ್ದಾರ್ ವಲ್ಲಭಬಾಯಿ ಪಟೇಲ್(31 ಅಕ್ಟೋಬರ್ 1875 -15 ಡಿಸೆಂಬರ್ 1950) ಅವರಿಗೆ ಸಲ್ಲುತ್ತದೆ. ಅವರ 143 ನೇ ಜನ್ಮದಿನೋತ್ಸವದಂದು ಏಕತಾ ಪ್ರತಿಮೆ ಅನಾವರಣಗೊಂಡಿದೆ.
ಇದು ಐತಿಹಾಸಿಕ ಕ್ಷಣ. ಏಕತೆಯ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಅವಿಸ್ಮರಣೀಯ ಕ್ಷಣದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಣ್ಮನ ತಣಿಸುತ್ತಿದೆ.
|
ಭಾರತದ ಪ್ರಮುಖ ಪ್ರವಾಸೀ ತಾಣವಾಗುತ್ತಾ?
ಉಕ್ಕಿನ ಮನುಷ್ಯರೆಂದೇ ಖ್ಯಾತರಾದ ಸರ್ದಾರ್ ವಲ್ಲಭಬಾಯ್ ಪಟೇಲ್ರ ಈ ಬೃಹತ್ ಪ್ರತಿಮೆಯು 182 ಮೀಟರ್ (ಸುಮಾರು 597 ಅಡಿ) ಎತ್ತರವಿದೆ. ದಕ್ಷಿಣ ಗುಜರಾತ್ನಲ್ಲಿ ನರ್ಮದಾ ನದಿಗೆ ಕಟ್ಟಲಾಗಿರುವ ಸರ್ದಾರ್ ಸರೋವರ್ ಅಣೆಕಟ್ಟಿನ ಎದುರಿನಲ್ಲಿ ಇದನ್ನು ನಿರ್ಮಿಸಲಾಗಿರುವುದರಿಂದ ಇದು ಖಂಡಿತವಾಗಿಯೂ ಭಾರತದ ಪ್ರಮುಖ ಪ್ರವಾಸೀ ತಾಣವಾಗಿ ಹೆಸರಾಗುವುದು ಖಂಡಿತ ಎನ್ನಿಸಿದೆ.
| Array |
ಅವಿಸ್ಮರಣೀಯ ಘಳಿಗೆ
ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪಟೇಲ್ ಅವರ ಪ್ರತಿಮೆಯನ್ನು ಇಂದು ಅನಾವರಣಗೊಳಿಸಲಾಗಿದ್ದು, ಈ ಅವಿಸ್ಮರಣೀಯ ಘಳಿಗೆಗೆ ನೂರಾರು ಗಣ್ಯರು ಸಾಕ್ಷಿಯಾದರು. ಈ ದಿನವನ್ನು ರಾಷ್ಟ್ರೀಯ ಏಕತಾ ದಿವಸ ಎಂದು ಇಡೀ ದೇಶದಾದ್ಯಂತ ಆಚರಿಸಲಾಗುತ್ತಿದೆ.
| Array |
ಗಿರ್ ಅರಣ್ಯಕ್ಕೂ ವೀಸಾ ಬೇಕಾಗುತ್ತಿತ್ತು!
ಸರ್ದಾರ್ ಪಟೇಲ್ ಅವರು ಅಂದು ಭಾರತದ ವಿವಿಧ ಪ್ರಾಂತಗಳನ್ನು ಒಗ್ಗೂಡಿಸುವ ಕ್ರಾಂತಿಕಾರಿ ತೀರ್ಮಾನ ಕೈಗೊಳ್ಳದೆ ಇದ್ದಿದ್ದರೆ, ಇಂದು ಗಿರ್ ಅರಣ್ಯದಲ್ಲಿ ಸಿಂಹಗಳನ್ನು ನೋಡುವುದಕ್ಕೂ, ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಮಾಡುವುದಕ್ಕೂ, ಹೈದರಾಬಾದಿನ ಚಾರ್ ಮಿನಾರ್ ಗೆ ತೆರಳುವುದಕ್ಕೂ ನಮಗೆ ವೀಸಾ ಬೇಕಾಗುತ್ತಿತ್ತು ಎಂಬ ನರೇಂದ್ರ ಮೋದಿಯವರ ಮಾತು ಸತ್ಯವೂ ಹೌದು.
| Array |
ಸರ್ದಾರ್ ಪಟೇಲ್ ಅವರ ಬಗ್ಗೆ
ಗುಜರಾತಿನ ಕರಮ್ ಸಂದ್ ನಲ್ಲಿ 1875ರ ಅಕ್ಟೋಬರ್ 31ರಂದು ಜನಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಕಾನೂನು ಪದವಿ ಪಡೆದಿದ್ದವರು. ಸ್ವಾತಂತ್ರ್ಯ ಚಳುವಳಿಯಲ್ಲಿ ಸಕ್ರಿಯರಾದ ಅವರು, ಸ್ವಾತಂತ್ರ್ಯಾನಂತರ ಭಾರತದ ಮೊದಲ ಗೃಹಮಂತ್ರಿಯೂ ಆಗಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications