ಗುಜರಾತ್ ಸಿಎಂ ರೂಪಾಣಿ ಅವರಿಗೆ ಏನಾಗಿತ್ತು, ಆರೋಗ್ಯ ಸ್ಥಿತಿ ಹೇಗಿದೆ?
ಅಹಮದಾಬಾದ್,ಫೆಬ್ರವರಿ 15: ಗುಜರಾತ್ ಮುಖ್ಯ ಮಂತ್ರಿ ವಿಜಯ್ ರೂಪಾಣಿ ಆರೋಗ್ಯದ ಮೇಲೆ 24 ತಾಸು ನಿಗಾ ಇಡಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.
ರೂಪಾಣಿ ಅವರಿಗೆ ಆಯಾಸ ಹಾಗೂ ಡೀಹೈಡ್ರೇಷನ್ ಆಗಿತ್ತು ಹಾಗಾಗಿ ಮೂರ್ಛೆ ಹೋಗಿದ್ದರು, ಸಂಪೂರ್ಣ ತಪಾಸಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳ ವರದಿ ಸಾಮಾನ್ಯವಾಗಿದೆ ಎಂದು ಯುಎನ್ ಮೆಹ್ತಾ ಆಸ್ಪತ್ರೆಯ ವೈದ್ಯರಾದ ಡಾ.ಆರ್ಕೆ.ಪಟೇಲ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರೂಪಾನಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ರೂಪಾಣಿ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ,ಅವರ ಆರೋಗ್ಯದ ಮೇಲೆ 24 ತಾಸು ನಿಗಾ ಇರಿಸಲಾಗುವುದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದರು
ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು.
ಎರಡು ಸಭೆಗಳ ನಂತರ , ಅವರು ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಅವರನ್ನು ಹಿಡಿಯಲು ಪ್ರಯತ್ನಿಸಿಲ್ಲ.
ಆ ವೇಳೆ ಸಹಾಯಕ್ಕಾಗಿ ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ ಸಿಎಂ ಕುಸಿದು ಬಿದ್ದಾಗಿತ್ತು. ಆದರೆ ಕೆಲ ನಿಮಿಷಗಳಲ್ಲಿ ಅವರು ಪುನಃ ಚೇತರಿಸಿಕೊಂಡಿದ್ದರು. ಆದರೆ ಮತ್ತೆ ಭಾಷಣ ಮುಂದುವರಿಸಲಿಲ್ಲ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications