ಗುಜರಾತ್ ಸಿಎಂ ರೂಪಾಣಿ ಅವರಿಗೆ ಏನಾಗಿತ್ತು, ಆರೋಗ್ಯ ಸ್ಥಿತಿ ಹೇಗಿದೆ?
ಅಹಮದಾಬಾದ್,ಫೆಬ್ರವರಿ 15: ಗುಜರಾತ್ ಮುಖ್ಯ ಮಂತ್ರಿ ವಿಜಯ್ ರೂಪಾಣಿ ಆರೋಗ್ಯದ ಮೇಲೆ 24 ತಾಸು ನಿಗಾ ಇಡಲಾಗುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.
ರೂಪಾಣಿ ಅವರಿಗೆ ಆಯಾಸ ಹಾಗೂ ಡೀಹೈಡ್ರೇಷನ್ ಆಗಿತ್ತು ಹಾಗಾಗಿ ಮೂರ್ಛೆ ಹೋಗಿದ್ದರು, ಸಂಪೂರ್ಣ ತಪಾಸಣೆ ಮಾಡಲಾಗಿದೆ. ಎಲ್ಲಾ ಪರೀಕ್ಷೆಗಳ ವರದಿ ಸಾಮಾನ್ಯವಾಗಿದೆ ಎಂದು ಯುಎನ್ ಮೆಹ್ತಾ ಆಸ್ಪತ್ರೆಯ ವೈದ್ಯರಾದ ಡಾ.ಆರ್ಕೆ.ಪಟೇಲ್ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರೂಪಾನಿ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ರೂಪಾಣಿ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ,ಅವರ ಆರೋಗ್ಯದ ಮೇಲೆ 24 ತಾಸು ನಿಗಾ ಇರಿಸಲಾಗುವುದು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಭಾನುವಾರ ಸಂಜೆ ವಡೋದರಾದ ನಿಜಾಂಪುರ ಪ್ರದೇಶದ ಮೆಹ್ಸಾನನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ವೇದಿಕೆಯ ಮೇಲೆಯೇ ಕುಸಿದು ಬಿದ್ದಿದ್ದರು
ಫೆಬ್ರವರಿ 21 ರಂದು ನಡೆಯಲಿರುವ ನಾಗರಿಕ ಸಮಿತಿಗಳ ಚುನಾವಣೆಗೆ ಮುನ್ನ ಮೂರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲು ರೂಪಾನಿ ವಡೋದರಾಗೆ ಆಗಮಿಸಿದ್ದರು.
ಎರಡು ಸಭೆಗಳ ನಂತರ , ಅವರು ನಗರದ ನಿಜಾಂಪುರ ಪ್ರದೇಶದಲ್ಲಿ ನಡೆದ ಮೂರನೇ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು ಭಾಷಣ ಮಾಡುವಾಗ ರೂಪಾನಿ ಕುಸಿದು ಬಿದ್ದಾಗ ಹಿಂದೆ ನಿಂತಿದ್ದ ಬಾಡಿ ಗಾರ್ಡ್ ಅವರನ್ನು ಹಿಡಿಯಲು ಪ್ರಯತ್ನಿಸಿಲ್ಲ.
ಆ ವೇಳೆ ಸಹಾಯಕ್ಕಾಗಿ ಬಿಜೆಪಿ ನಾಯಕರು ಧಾವಿಸಿದರೂ ಅಷ್ಟರಲ್ಲೇ ಸಿಎಂ ಕುಸಿದು ಬಿದ್ದಾಗಿತ್ತು. ಆದರೆ ಕೆಲ ನಿಮಿಷಗಳಲ್ಲಿ ಅವರು ಪುನಃ ಚೇತರಿಸಿಕೊಂಡಿದ್ದರು. ಆದರೆ ಮತ್ತೆ ಭಾಷಣ ಮುಂದುವರಿಸಲಿಲ್ಲ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications