ವೈರಲ್ ವಿಡಿಯೋ: ಅಹ್ಮದಾಬಾದಿನಲ್ಲಿ ಶಾಪಿಂಗ್ ಮಾಡಿದ ಪ್ರಧಾನಿ ಮೋದಿ!
Recommended Video

ಅಹ್ಮದಾಬಾದ್, ಜನವರಿ 18: ಖಾದಿ ಬಟ್ಟೆ ಕೊಂಡು, ರುಪೇ ಕಾರ್ಡ್ ಮೂಲಕ ಹಣ ನೀಡಿ ಪ್ರಧಾನಿ ನರೇಂದ್ರ ಮೊದಿ ಅವರು ಶಾಪಿಂಗ್ ನಲ್ಲಿ ಬ್ಯುಸಿಯಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುಜರಾತಿನ ಅಹ್ಮದಾಬಾದಿನಲ್ಲಿ ನಡೆಯುತ್ತಿರುವ ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮಿತ್ ನಲ್ಲಿ ಭಾಗವಹಿಸಿದ್ದ ಅವರು ನಂತರ ಅಂಬವಾಡ್ ಶಾಪಿಂಗ್ ಹಬ್ಬದಲ್ಲಿ ಪಾಲ್ಗೊಂಡರು. ಈ ಸಮಯದಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವ ಮೂಲಕ ಸ್ವದೇಶಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವಂತೆ ಕರೆ ನೀಡಿದರು.
#WATCH Prime Minister Narendra Modi purchases jacket from Khadi & Village Industries Board stall at Amdavad Shopping Festival, in Ahmedabad, makes payment using his RuPay card. pic.twitter.com/TmDOxwmRi2
— ANI (@ANI) January 17, 2019
ನಂತರ ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ, "ಅಹ್ಮದಾಬಾದಿನ ಶಾಪಿಂಗ್ ಹಬ್ಬದಲ್ಲಿ ಶಾಪಿಂಗ್ ಮಾಡದೆ ಇರಲು ನನಗೆ ಸಾಧ್ಯವಾಗಿಲ್ಲ. ಕೆಲವು ಖಾದಿ ಉತ್ಪನ್ನಗಳನ್ನು ನಾನು ಖರೀದಿಸಿ, ರುಪೇ ಕಾರ್ಡ್ ಮೂಲಕ ಹಣ ನೀಡಿದೆ. ನೀವು ಸಹ ಖಾದಿ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಖರೀದಿಸಿ, ಈ ಉದ್ಯಮದ ಸಬಲೀಕರಣಕ್ಕೆ ನೆರವಾಗಿ. ಅದು ಈ ಕೈಗಾರಿಕೆಗೆ ಮತ್ತು ಬಾಪೂ ಅವರಿಗೂ ನೀಡುವ ಗೌರವ" ಎಂದಿದ್ದಾರೆ.

ಜ.18-20 ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ಸುಮಾರು ಐದು ದೇಶಗಳ, 30000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಹಲವರು ಪ್ರತಿಷ್ಠಿತ ಕಂಪನಿಗಳ ಆಯಕಟ್ಟಿನ ಹುದ್ದೆಯಲ್ಲಿರುವವರೂ ಭಾಗವಹಿಸಲಿದ್ದಾರೆ. ಮುಖೇಶ್ ಅಂಬಾನಿ, ಉದಯ್ ಕೋಟಕ್, ಕುಮಾರ್ ಮಂಗಲಂ ಬಿರ್ಲಅ, ಗೌತಮ್ ಅದಾನಿ, ಆದಿ ಗೋದ್ರೇಜ್, ಪಂಕಜ್ ಪಟೇಲ್ ಸೇರಿದಂತೆ ಭಾರತದ ಶ್ರೀಮಂತ ಉದ್ಯಮಿಗಳು ಭಾಗವಹಿಸಲಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications