ದೆವ್ವ ಬಿಡಿಸಲು ಹೋಗಿ ಜೀವವನ್ನೇ ತೆಗೆದರು!: ಗುಜರಾತ್ನಲ್ಲಿ ದಾರುಣ ಘಟನೆ
ಅಹಮದಾಬಾದ್, ನವೆಂಬರ್ 16: ಗುಜರಾತ್ನಲ್ಲಿ 50 ವರ್ಷದ ವ್ಯಕ್ತಿಯಲ್ಲಿ ಹೊಕ್ಕಿರುವ 'ದೆವ್ವ'ವನ್ನು ಹೊರಗೆ ಓಡಿಸಲು ಕುಟುಂಬದ ಸದಸ್ಯರೇ ಅವರ ಎದೆಯ ಮೇಲೆ ಹಾರಿ ಅವರ ಜೀವ ತೆಗೆದಿದ್ದಾರೆ. ಆರು ಮಂದಿಯನ್ನು ಬಂಧಿಸಲಾಗಿದೆ.
ಮೃತ ವ್ಯಕ್ತಿಯನ್ನು ಸೂರತ್ನ ಕಟಾಗ್ರಾಮದ ನಿವಾಸಿ ಕಾಂಜಿ ಕುಂಭಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ಕಾಂಜಿ ಅವರ ಮೇಲೆ ವಾಮಾಚಾರ ಪ್ರಯೋಗಿಸುವ ವೇಳೆ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಅವರ ಅಪ್ರಾಪ್ತ ವಯಸ್ಸಿನ ಮಗ ಸೇರಿದಂತೆ ಮೂವರು ಗಂಡು ಮಕ್ಕಳು, ಒಬ್ಬ ಮಗಳು ಮತ್ತು ಪತ್ನಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾಂಜಿ ಕುಂಭಾರ್ ಅವರಿಗೆ ಕುಂಕುಮದ ನೀರನ್ನು ಕುಡಿಸಿದ್ದ ಕುಟುಂಬದ ಸದಸ್ಯರು, ಸರದಿಯಲ್ಲಿ ಅವರ ಎದೆಯ ಮೇಲೆ ಹಾರಿದ್ದರು. ವಜ್ರದ ಕೆಲಸಗಾರರಾದ ಕಾಂಜಿ ಕೂಡ ವಾಮಾಚಾರ ಮತ್ತು ತಂತ್ರಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ.

ಕಾಂಜಿ ಅವರನ್ನು ದೆವ್ವ ಆವರಿಸಿಕೊಂಡಿದ್ದು, ಅದನ್ನು ವಾಮಾಚಾರ ಪ್ರಯೋಗದ ಮೂಲಕ ಹೊರಕ್ಕೆ ಕಳುಹಿಸಲು ಅವರ ಕುಟುಂಬದ ಸದಸ್ಯರು ನಿರ್ಧರಿಸಿದ್ದರು.
ನವೆಂಬರ್ 11ರಂದೇ ಈ ಘಟನೆ ಸಂಭವಿಸಿತ್ತು. ಆದರೆ, ಮೃತ ಕಾಂಜಿ ಅವರ ದೇಹವನ್ನು ಮನೆಯಲ್ಲಿಯೇ ಬಿಟ್ಟಿದ್ದ ಕುಟುಂಬದ ಸದಸ್ಯರು, ಸೂರತ್ ತೊರೆದು ಬನಶ್ಕಾಂತಾ ಜಿಲ್ಲೆಯ ತಮ್ಮ ಊರಿಗೆ ಪಲಾಯನ ಮಾಡಿದ್ದರು.
ಆದರೆ, ನವೆಂಬರ್ 13ರಂದು ಕುಟುಂಬದ ಸದಸ್ಯರು ಮನೆಗೆ ಮರಳಿದ್ದರು. ಬಳಿಕ ಅವರ ಪತ್ನಿ ಪೊಲೀಸ್ ಠಾಣೆಗೆ ತೆರಳಿ ತಮ್ಮ ಪತಿ ಮನೆಯಲ್ಲಿ ಮೃತಪಟ್ಟಿರುವುದಾಗಿ ದೂರು ನೀಡಿದ್ದರು.
ಇದನ್ನು ಆಕಸ್ಮಿಕ ಸಾವು ಎಂದೇ ಪೊಲೀಸರು ದೂರು ದಾಖಲಿಸಿದ್ದರು. ಆದರೆ, ಈ ಸಾವು ಆಘಾತದಿಂದ ಹಾಗೂ ಅವರ ಶ್ವಾಸಕೋಶ ಮತ್ತು ಗುಲ್ಮಕ್ಕೆ ಉಂಟಾದ ತೀವ್ರ ಗಾಯದಿಂದ ರಕ್ತಸ್ರಾವ ಉಂಟಾಗಿ ಅವರು ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಿಂದ ಗೊತ್ತಾಯಿತು.
ಇದರಿಂದ ಅನುಮಾನಗೊಂಡ ಪೊಲೀಸರು ಕುಟುಂಬದವರನ್ನು ವಿಚಾರಣೆಗೆ ಒಳಪಡಿಸಿದಾಗ ಅಳಲು ಪ್ರಾರಂಭಿಸಿದ ಅವರು, ಇಡೀ ಘಟನೆಯನ್ನು ಬಿಚ್ಚಿಟ್ಟರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications