'ಸೊಹ್ರಾಬುದ್ದಿನ್ ಎನ್ ಕೌಂಟರ್ ಆಗದಿದ್ದರೆ ಮೋದಿ ಹತ್ಯೆಯಾಗುತ್ತಿತ್ತು'
ಅಹ್ಮದಾಬಾದ್, ಡಿಸೆಂಬರ್ 22 : ಅಕಸ್ಮಾತ್ ಸೊಹ್ರಾಬುದ್ದಿನ್ ಶೇಖ್ ಎನ್ ಕೌಂಟರ್ ಆಗದೆ ಇದ್ದಿದ್ದರೆ ನರೇಂದ್ರ ಮೋದಿ ಅವರ ಹತ್ಯೆಯಾಗುತ್ತಿತ್ತು ಎಂದು ನಿವೃತ್ತ ಐಪಿಎಸ್ ಅಧಿಕಾರಿ ಡಿಜಿ ವಂಝಾರಾ ಹೇಳಿದ್ದಾರೆ.
ಸೊಹ್ರಾಬುದ್ದಿನ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿನಲ್ಲಿ ಎಲ್ಲಾ 22 ಆರೋಪಿಗಳನ್ನೂ ಖುಲಾಸೆಗೊಳಿಸಿತ್ತು. ಹತ್ಯೆಗೀಡಾದವರ ಸಾವಿನಿಂದ ಬೇಜಾರಾಗಿದೆ, ಸಾಕ್ಷ್ಯವಿಲ್ಲದಿದ್ದರಿಂದ ಎಲ್ಲ ಆರೋಪಿಗಳನ್ನು ಖುಲಾಸೆ ಮಾಡಬೇಕಾಯಿತು ಎಂದು ನ್ಯಾಯಾಧೀಶ ಎಸ್ ಜೆ ಶರ್ಮಾ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬೆಳವಣಿಗೆಯ ನಂತರ ಪ್ರತಿಕ್ರಿಯೆ ನೀಡಿದ ವಂಝಾರಾ, ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಸೊಹ್ರಾಬುದ್ದಿನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ ವಂಝಾರಾ, ಗುಜರಾತಿನ ವಿವಾದಾತ್ಮಕ ಐಪಿಎಸ್ ಅಧಿಕಾರಿಯಾಗಿದ್ದರು.
ರಾಜಸ್ಥಾನ ಮತ್ತು ಗುಜರಾತ್ ನ ಜಂಟಿ ಪೊಲೀಸ್ ತಂಡ ಸೊಹ್ರಾಬುದ್ದಿನ್ ನನ್ನು 2005ರ ನವೆಂಬರ್ 26ರಂದು ಮತ್ತು ಆತನ ಹತ್ತಿರದ ಸಹಚರ ತುಳಸಿರಾಮ್ ಪ್ರಜಾಪತಿಯನ್ನು 2006ರ ಡಿಸೆಂಬರ್ 26ರಂದು ಎನ್ಕೌಂಟರ್ ಮಾಡಿ ಸಾಯಿಸಿತ್ತು. ಈವೆರಡೂ ಎನ್ಕೌಂಟರ್ ಗಳು ನಕಲಿ ಎಂದು ಆರೋಪಿಸಲಾಗಿತ್ತು.

ಮೋದಿ ಹತ್ಯೆಯಾಗುತ್ತಿತ್ತು
ಸೊಹ್ರಾಬುದ್ದಿನ್ ಎನ್ ಕೌಂಟರ್ ಮಾಡದೆ ಬೇರೆ ವಿಧಿ ಇರಲಿಲ್ಲ. ಸೊಹ್ರಾಬುದ್ದಿನ್ ಹತ್ಯೆಯಾಗದೆ ಇದ್ದಿದ್ದರೆ ಅಂದಿನ ಗುಜರಾತ್ ಮುಖ್ಯಮಂತ್ರಿ ಮತ್ತು ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಯಾಗುತ್ತಿತ್ತು. ಅದಕ್ಕೆ ಪಾಕಿಸ್ತಾನ ಸಂಚು ರೂಪಿಸಿತ್ತು ಎಂದು ಅವರು ಹೇಳಿಕೆ ನೀಡಿದ್ದರು.

ರಾಜಕೀಯದಿಂದ ಪೊಲೀಸರು ಬಲಿಪಶು
ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶ ಪೊಲೀಸರನ್ನು ಸೊಹ್ರಾಬುದ್ದಿನ್ ಎನ್ ಕೌಂಟರ್ ಪ್ರಕರಣದಲ್ಲಿ ಬಲಿಪಶುಗಳನ್ನಾಗಿ ಮಾಡಲಾಯ್ತು. ಆಗಿನ ಗುಜರಾತ್ ಬಿಜೆಪಿ ಸರ್ಕಾರ ಮತ್ತು ಕೇಂದ್ರದ ಯುಪಿಎ ಸರ್ಕಾರದ ರಾಜಕೀಯದಲ್ಲಿ ನಾವು ಬಲಿಪಶುವಾದೆವು ಎಂದು ಎಂದು ಅವರು ದೂರಿದ್ದಾರೆ.

ನಕಲಿ ಎಂಬುದು ಸುಳ್ಳು
ಮೋದಿಜೀ ಅವರನ್ನು ಕೊಲ್ಲಲು ಪಾಕಿಸ್ತಾನವೇ ಕೆಲವರಿಗೆ ಸ್ಪಾನ್ಸರ್ ಮಾಡುತ್ತಿತ್ತು. ಅದನ್ನು ತಿಳಿದೇ ನಾವು ಕೆಲವು ಎನ್ ಕೌಂಟರ್ ನಡೆಸಬೇಕಾಯ್ತು. ಆದರೆ ನಂತರ ಅದು ರಾಜಕೀಯವಾಗಿ ಬದಲಾಯ್ತು. ಸಕಾರಣಕ್ಕಾಗಿ ನಡೆದ ಎನ್ ಕೌಂಟರ್ ಅನ್ನು ನಕಲಿ ಎಂದು ಕರೆಯಲಾಯ್ತು ಎಂದು ವಂಝಾರಾ ದೂರಿದ್ದಾರೆ.

ಆರೋಪಿಗಳ ಖುಲಾಸೆ
ಹಲವು ವರ್ಷಗಳಿಂದ ಸಿಬಿಐ ವಿಶೇಷ ನ್ಯಾಯಾಲಯ ಸೊಹ್ರಾಬುದ್ದಿನ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿತ್ತು. ಅದರ ತೀರ್ಪು ಶುಕ್ರವಾರ ಹೊರಬಿದ್ದಿದ್ದು, ಸರಿಯಾದ ಸಾಕ್ಷ್ಯಾಧಾರದ ಕೊರತೆಯ ಕಾರಣ ನೀಡಿ, ಎಲ್ಲಾ 22 ಆರೋಪಿಗಳನ್ನೂ ಖುಲಾಸೆಗೊಳಿಸಲಾಯ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications