ಈ ಸುಂದರ ನದಿ... ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಅಹಮದಾಬಾದ್, ಮಾರ್ಚ್ 01: ಮಹಿಳೆಯೊಬ್ಬರು ನದಿ ಬಳಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ. 23 ವರ್ಷದ ಆಯೆಷಾ ಎಂಬ ಮಹಿಳೆ, ಸಬರಮತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನದಿಗೆ ಹಾರುವ ಮುನ್ನ ಸೆಲ್ಫಿ ವಿಡಿಯೋ ಮಾಡಿರುವ ಅವರು, ತನ್ನದೇ ಇಚ್ಛೆಯಿಂದ ಜೀವನವನ್ನು ಕೊನೆಗಾಣಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ನಗುತ್ತಲೇ, ಭಾವನಾತ್ಮಕವಾಗಿ ಮಾತನಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಯೆಷಾಗೆ 2018ರಲ್ಲಿ ಆರಿಫ್ ಖಾನ್ ಎಂಬುವರೊಂದಿಗೆ ಮದುವೆಯಾಗಿತ್ತು. ವರದಕ್ಷಿಣೆಗಾಗಿ ಗಂಡನ ಮನೆಯಲ್ಲಿ ಪೀಡಿಸುತ್ತಿದ್ದರು ಎನ್ನಲಾಗಿದೆ. "ಮನೆಯವರಿಗೆ ಹಣ ನೀಡುತ್ತಿದ್ದರೂ ಅವರ ಆಸೆಗಳು ಕೊನೆಯಾಗಲೇ ಇಲ್ಲ. ಗಂಡನೂ ತನ್ನೊಂದಿಗೆ ಈ ನಡುವೆ ಮಾತು ಬಿಟ್ಟಿದ್ದ" ಎಂದು ಹೇಳಿಕೊಂಡಿದ್ದಾರೆ.

ನದಿ ಬಳಿ ಕುಳಿತು ಎರಡು ನಿಮಿಷ ವಿಡಿಯೋ ಮಾಡಿದ್ದು, "ನನ್ನ ನಿರ್ಧಾರದಂತೆ ಈ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದಕ್ಕೆ ಯಾರೂ ಕಾರಣರಲ್ಲ" ಎಂದು ಹೇಳಿಕೊಂಡಿದ್ದಾರೆ. ತಂದೆಯನ್ನು ಕೇಳಿಕೊಂಡಿರುವ ಅವರು, "ನೀವು ಎಷ್ಟು ದಿನ ಹೋರಾಡುತ್ತೀರಾ? ಕೇಸ್ ವಾಪಸ್ ತೆಗೆದುಕೊಳ್ಳಿ. ಆಯೆಷಾ ಕಿತ್ತಾಟಗಳಿಗೆ ಇರುವವಳಲ್ಲ. ನಾನು ಆರಿಫ್ ಪ್ರೀತಿಸುತ್ತೇನೆ. ಆತನಿಗೆ ಏಕೆ ಸಮಸ್ಯೆ ನೀಡಬೇಕು. ಅವನಿಗೆ ಸ್ವಾತಂತ್ರ್ಯ ಕೊಡುತ್ತಿದ್ದೇನೆ. ನಾನು ನನ್ನ ಜೀವನವನ್ನು ಕೊನೆಗಾಣಿಸಿಕೊಳ್ಳುತ್ತಿದ್ದೇನೆ. ಅಲ್ಲಾನಿಗೆ ಕೇಳುತ್ತೇನೆ. ನಾನು ಮಾಡಿದ ತಪ್ಪೇನೆಂದು" ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಈ ಸುಂದರವಾದ ನದಿ, ನನ್ನನ್ನು ತನ್ನೊಳಗೆ ಸೇರಿಸಿಕೊಳ್ಳುತ್ತದೆ ಎನ್ನುವ ಭರವಸೆ ಇದೆ. ನಾನು ಗಾಳಿಯಿದ್ದಂತೆ. ತೇಲಲು ಬಯಸುತ್ತೇನೆ, ತೇಲುತ್ತಲೇ ಇರುತ್ತೇನೆ ಎಂದು ಹೇಳಿ ನದಿಗೆ ಹಾರಿದ್ದಾರೆ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications