Breaking: ಗರ್ಲ್ಫ್ರೆಂಡ್ ಮನೆಯವರಿಂದ ಹಣಕ್ಕಾಗಿ ಬ್ಲ್ಯಾಕ್ಮೇಲ್: ಯುವಕ ಸಾವು
ಕಚ್, ಜೂ. 1: ಪ್ರೀತಿಸಿದ ಯುವತಿಯನ್ನು ಯಾಮಾರಿಸಿ ಅವಳಿಂದ ಅನೇಕ ಸೌಲಭ್ಯಗಳನ್ನು ಪಡೆದು ನಂತರ ಅವಳನ್ನು ಕೈಬಿಟ್ಟಿರುವ, ಹಾಗೆಯೇ ಪ್ರೀತಿಸಿದ ಯುವಕನನ್ನು ಅವನಿಂದ ಅನೇಕ ಉಡುಗೊರೆಗಳನ್ನು ಪಡೆದು ಮನೆಯವರ ವಿರೋಧದಿಂದಲೋ ಇಲ್ಲ ಸ್ವ ಇಚ್ಚೆಯಿಂದಲೊ ಹುಡುಗಿಯರು ದೂರ ಮಾಡಿರುವ ಪ್ರಕರಣಗಳನ್ನು ನೋಡಿದ್ದೇವೆ. ಈ ಮಧ್ಯೆ ಹಣಕ್ಕಾಗಿ ಹುಡುಗಿಯ ಮನೆಯವರು ಹುಡುಗನನ್ನು ಯಾಮಾರಿಸಿರುವ ಘಟನೆ ಗುಜರಾತ್ನ ಕಚ್ನಲ್ಲಿ ನಡೆದಿದೆ.
ತಾನು ಪ್ರೀತಿಸಿದ ಗೆಳತಿಯ ಮನೆಯವರು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಲು ಪ್ರಾರಂಭಿಸಿದ್ದರಿಂದ 19 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದು ವೇಳೆ ಹಣ ಪಾವತಿಸದಿದ್ದರೆ ನಕಲಿ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಹೀಗಾಗಿ ದಿಗ್ವಿಜಯ್ ಸಿಂಗ್ ಪರ್ಮಾರ್ ಎಂಬಾತ ತನ್ನ ಮನೆಯ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡ ಘಟನೆ ಕಚ್ನ ಅಂಜಾರ್ನಲ್ಲಿ ನಡೆದಿದೆ. ತನ್ನ ಗೆಳತಿ ಮೆಹಕ್ನ ಕುಟುಂಬವು ಅವನಿಂದ ಹಣಕ್ಕಾಗಿ ಬೇಡಿಕೆಯಿಡಲು ಪ್ರಾರಂಭಿಸಿದ ನಂತರ ಅವನು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾನೆ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ದಿಗ್ವಿಜಯ್ ಸಿಂಗ್ ರೆಕಾರ್ಡ್ ಮಾಡಿದ ಆಡಿಯೊದಲ್ಲಿ, "ಹುಡುಗಿ ಮೆಹಕ್ ಅವರ ತಾಯಿ ಮತ್ತು ಸಹೋದರರು ನನ್ನಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ನಾನು ಪಾವತಿಸದಿದ್ದರೆ ನನ್ನ ವಿರುದ್ಧ ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಅವರು ಹೇಳಿದ್ದಾರೆ. ನನ್ನ ಬಳಿ ಹಣ ಇಲ್ಲ. ಹಾಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ" ಎಂದು ಹೇಳಿದ್ದಾನೆ.
ಈಗ ತಲೆಮರೆಸಿಕೊಂಡಿರುವ ಬಾಲಕಿಯ ಕುಟುಂಬದವರ ವಿರುದ್ಧ ಯುವಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications