ವಿಶಾಖಪಟ್ಟಣಂ ದುರಂತ: 13 ಸಾವಿರ ಟನ್ ಸ್ಟೈರೀನ್ ದಕ್ಷಿಣ ಕೊರಿಯಾಕ್ಕೆ ವಾಪಸ್
ವಿಶಾಖಪಟ್ಟಣಂ, ಮೇ 12: ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ದುರಂತದ ಬಳಿಕ 13 ಸಾವಿರ ಟನ್ ಸ್ಟೈರೀನ್ ಅನ್ನು ದಕ್ಷಿಣ ಕೊರಿಯಾಕ್ಕೆ ಹಿಂದಿರುಗಿಸಲಾಗಿದೆ.
Recommended Video
ಆಂಧ್ರಪ್ರದೇಶದ ರಾಸಾಯನಿಕ ಕಾರ್ಖಾನೆಯ ವಿಷ ಅನಿಲ ಸೋರಿಕೆ ದುರಂತ ಒಟ್ಟು 13 ಮಂದಿಯನ್ನು ಬಲಿಪಡೆದಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.
ಇದರ ಜೊತೆ ಸುಮಾರು 180 ಮಂದಿಯ ಸ್ಥಿತಿ ಗಂಭೀರವಾಗಿದ್ದು, 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥವಾಗಿದ್ದರು.ಸ್ಟೈರೀನ್ (Styrene) ಪ್ಲಾಸ್ಟಿಕ್ ತಯಾರಿಕೆಗೆ ಉಪಯೋಗಿಸುವ ರಾಸಾಯನಿಕ ಸಂಯುಕ್ತವಾಗಿದೆ. ಬೆಂಜೀನ್ ರಾಸಾಯನಿಕದಿಂದ ಇದನ್ನು ಪಡೆಯಬಹುದು. ರಸಾಯನಶಾಸ್ತ್ರದಲ್ಲಿ ಇದಕ್ಕೆ ಇಥೆನೈಲ್ ಬೆಂಜೀನ್, ವೀನೈಲ್ ಬೆಂಜೀನ್ ಮತ್ತು ಫೀನೈಲ್ ಈಥೀನ್ ಎನ್ನುತ್ತಾರೆ. C6H5CH=CH2 ಇದರ ರಾಸಾಯನಿಕ ಸೂತ್ರವಾಗಿದೆ.

ಸ್ಟೈರೀನ್ ಲ್ಯಾಟೆಕ್ಸ್, ಸಿಂಥೆಟಿಕ್ ರಬ್ಬರ್ ಮತ್ತು ಪಾಲಿಸ್ಟೈರೀನ್ ರಾಳಗಳನ್ನು ತಯಾರಿಸಲು ಬಳಸುವ ರಾಸಾಯನಿಕವಾಗಿದೆ. ಅಲ್ಲದೆ ಪಾಲಿಸ್ಟೈರೀನ್ ಪ್ಲಾಸ್ಟಿಕ್ ಮತ್ತು ಅಂಟುಗಳ ತಯಾರಿಕೆಗೆ ಈ ಸ್ಟೈರೀನ್ ರಸಾಯನಿಕವನ್ನು ಉಪಯೋಗಿಸಲಾಗುತ್ತದೆ.
ಜಿಡ್ಡಿನಂತಿರುವ ಈ ಅನಿಲಕ್ಕೆ ಬಣ್ಣ ಇರುವುದಿಲ್ಲ. ಕೆಲವೊಮ್ಮೆ ಇದು ನಸು ಹಳದಿಯಂತೆ ತೋರಬಹುದು. ರಾಸಾಯನಿಕ ಪ್ರಮಾಣ ಹೆಚ್ಚಾಗಿದ್ದರೆ ವಾಸನೆ ಕಠಿಣವಾಗಿರುತ್ತದೆ. ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು. ಹಾಗೇ ಈ ರಾಸಾಯನಿಕವು ಗಾಳಿಗೆ ಬಂದರೆ ಬಹಳ ಬೇಗ ಆವಿಯಾಗಿಹೋಗುತ್ತದೆ ಎಂದು ತಜ್ಞರು ಹೇಳಿದ್ದಾರೆ.
ಮೊದಲು 8 ಸಾವಿರ ಟನ್ ಕಂಟೈನರ್ ಮೂಲಕ ಕಳುಹಿಸಲಾಗುತ್ತಿದೆ. ಮುಂದಿನ ಕೆಲ ದಿನಗಳಲ್ಲಿ ಮತ್ತ 5 ಸಾವಿರ ಟನ್ ಕಳುಹಿಸಿಕೊಡಲಾಗುತ್ತದೆ ಎಂದು ಡಿಸಿ ತಿಳಿಸಿದ್ದಾರೆ. ಎಲ್ಜಿ ಪಾಲಿಮರ್ಸ್ ಕಂಪನಿಗೆ ಎನ್ಜಿಟಿ 50 ಕೋಟಿ ರೂ ದಂಡ ವಿಧಿಸಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಿಯಾ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಹತ್ತಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇದು ದಕ್ಷಿಣ ಕೊರಿಯಾದ ಎಲ್ ಜಿ ಗ್ರೂಪ್ ನ ಕಂಪನಿಯಾಗಿದ್ದು, ಇದರ ಕೇಂದ್ರ ಕಚೇರಿ ಮುಂಬೈನಲ್ಲಿದೆ.
1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಕಂಪನಿ ಪಾಲಿಸ್ಟ್ರಿಯೆನ್ ತಯಾರಿಸುತ್ತಿತ್ತು. ಈ ಕಂಪನಿ 1978ರಲ್ಲಿ ಮೆಕ್ ಡೊವೆಲ್ ಮತ್ತು ಯುಬಿ ಗ್ರೂಪ್ ಜತೆ ವಿಲೀನವಾಗಿತ್ತು. ನಂತರ ದಕ್ಷಿಣ ಕೊರಿಯಾದ ಎಲ್ ಜಿ ಕೆಮಿಕಲ್ ಭಾರತದಲ್ಲಿ ಮಾರುಕಟ್ಟೆಗಾಗಿ ಹುಡುಕಾಟ ನಡೆಸುತ್ತಿತ್ತು.
ಆಗ ಯುಬಿ ಗ್ರೂಪ್ ಒಡೆತನದಲ್ಲಿದ್ದ ಹಿಂದೂಸ್ತಾನ್ ಪಾಲಿಮರ್ಸ್ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡು 1997ರಲ್ಲಿ ಎಲ್ ಜಿ ಪಾಲಿಮರ್ಸ್ ಇಂಡಿಯಾ ಎಂದು ಹೆಸರನ್ನು ಬದಲಾಯಿಸಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications