ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ, ಜಗನ್ ಮಹತ್ವ ಘೋಷಣೆ
Recommended Video
ಅಮರಾವತಿ, ಜನವರಿ 20: ಆಂಧ್ರಪ್ರದೇಶಕ್ಕೆ ಐವರು ಉಪ ಮುಖ್ಯಮಂತ್ರಿಗಳನ್ನು ಹೆಸರಿಸಿ ಅಚ್ಚರಿ ಮೂಡಿಸಿದ್ದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಇಂದು ಮತ್ತೊಂದು ಮಹತ್ವದ ನಿರ್ಣಯವನ್ನು ಪ್ರಕಟಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಅಮರಾವತಿ ಅಲ್ಲದೆ ಇನ್ನೆರಡು ರಾಜಧಾನಿಗಳನ್ನು ಹೆಸರಿಸಲಾಗಿದೆ. ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಹೊಂದುವ ನಿರ್ಣಯಕ್ಕೆ ಸಚಿವ ಸಂಪುಟದಲ್ಲಿ ಸೋಮವಾರದಂದು ಒಮ್ಮತ ಸಿಕ್ಕಿದೆ.
ಜಗನ್ ಮೋಹನ್ ರೆಡ್ಡಿ ಸರ್ಕಾರವು ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಕ್ಕೊಂದು ಎಂಬಂತೆ ಮೂರು ರಾಜಧಾನಿಗಳನ್ನು ರಾಜ್ಯಕ್ಕೆ ನೀಡುತ್ತಿದೆ. ಅಮರಾವತಿ ರಾಜಧಾನಿಯಾಗಿ ಅಭಿವೃದ್ಧಿ ಹೊಂದುತ್ತಿದೆ ಜೊತೆಗೆ ವಿಶಾಖಪಟ್ಟಣಂ ಹಾಗೂ ಕರ್ನೂಲ್ ಕೂಡಾ ಅಧಿಕೃತ ರಾಜಧಾನಿಯಾಗಲಿದೆ.
ಸರ್ಕಾರಿ ಕಚೇರಿಗಳು, ಸಿಎಂ ಕಚೇರಿ ಇನ್ಮುಂದೆ ವಿಶಾಖಪಟ್ಟಣಂನಿಂದ ಕಾರ್ಯನಿರ್ವಹಿಸಿದೆ. ಹೈಕೋರ್ಟ್ ಕರ್ನೂಲ್ ಪಾಲಾಗಿದೆ. ಎಪಿಸಿಆರ್ ಡಿಎ 2020ಕಾಯ್ದೆಗೆ ಅನುಮತಿ ಸಿಕ್ಕಿದ್ದು, ಅಮರಾವತಿ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಚಾಲನೆ ಸಿಕ್ಕಿದೆ.

ಈ ನಡುವೆ ತೆಲುಗು ದೇಶಂ ಪಾರ್ಟಿ ಬೆಂಬಲಿತ ರೈತ ಮುಖಂಡರು, ಕಾರ್ಯಕರ್ತರು ಚಲೋ ಅಸೆಂಬ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಅಮರಾವತಿ ಜೊತೆಗೆ ಇನ್ನೆರಡು ರಾಜಧಾನಿಯಾಗುವುದನ್ನು ವಿರೋಧಿಸಿದ್ದಾರೆ.
ಇತ್ತೀಚೆಗೆ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಅಧಿಕೃತವಾಗಿ ಮನವಿ ಪತ್ರ ಕಳಿಸಿದ್ದ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಅಮರಾವತಿ ಮೇಲೆ 50000 ಕೋಟಿ ಹೂಡಿಕೆಯಾಗಿದೆ, ಇದನ್ನು ಹಿಂಪಡೆಯುವ ಆತಂಕ ಎದುರಾಗಲಿದೆ, ರೈತರಿಗೆ ಅನ್ಯಾಯವಾಗಲಿದೆ ಎಂದಿದ್ದರು. ಆದರೆ, ಸರಣಿ ಪ್ರತಿಭಟನೆ ನಡುವೆಯೂ ಮೂರು ರಾಜಧಾನಿಗಳನ್ನು ಹೊಂದುವ ವಿಧೇಯಕಕ್ಕೆ ಕ್ಯಾಬಿನೆಟ್ ಅಸ್ತು ಎಂದಿದ್ದು, ರಾಜಧಾನಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications