ವಿಶಾಖಪಟ್ಟಣಂ ಸೆಂಟ್ರಲ್ ಜೈಲ್ನ 57 ಕೈದಿಗಳಲ್ಲಿ ಕೊರೊನಾ ಸೋಂಕು ಪತ್ತೆ
ಅಮರಾವತಿ, ಮೇ 21: ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಸೆಂಟ್ರಲ್ ಜೈಲಿನಲ್ಲಿ 57 ಜನ ಬಂಧಿತರು ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ. ಈ ಬಗ್ಗೆ ಜೈಲಿನ ಅಧಿಕಾರಿಗಳು ಶುಕ್ರವಾರ ಮಾಹಿತಿಯನ್ನು ನೀಡಿದ್ದಾರೆ. ಎಲ್ಲಾ ಕೊರೊನಾ ಪಾಸಿಟಿವ್ ಬಂದ ರೋಗಿಗಳಿಗೆ ಸೆಂಟ್ರಲ್ ಜೈಲಿನ ವಿಶೇಷ ಐಸೋಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಶಾಖಪಟ್ಟಣಂ ಸೆಂಟ್ರಲ್ ಜೈಲ್ನ ಪೊಲೀಸ್ ಅಧೀಕ್ಷಕ ರಾಹುಲ್ ಈ ಬಗ್ಗೆ ಖಚಿತಪಡಿಸಿದ್ದಾರೆ. ಜೈಲಿನಲ್ಲಿದ್ದ 102 ಕೈದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 57 ಜನರು ಕೊರೊನಾ ವೈರಸ್ಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.
ಕೆಲ ಕೈದಿಗಳಲ್ಲಿ ವಾರದ ಹಿಂದೆ ಜ್ವರ ಮುಂತಾದ ಕೊರೊನಾ ವೈರಸ್ನ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ತಕ್ಷಣವೇ ಜೈಲಿನ ಒಳಗೆ ಕೊರೊನಾ ವೈರಸ್ ಪರೀಕ್ಷೆಗೆ ವ್ಯವಸ್ಥೆಯನ್ನು ಮಾಡಲಾಯಿತು ಎಂದು ಪೊಲೀಸ್ ಅಧೀಕ್ಷಕ ರಾಹುಲ್ ಮಾಹಿತಿಯನ್ನು ನೀಡಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಎಲ್ಲರೂ ಆರೋಗ್ಯದಿಂದಿದ್ದಾರೆ. ಇಬ್ಬರು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು ನಿಗಾವಹಿಸಿದ್ದಾರೆ ಅವರು ತಿಳಿಸಿದ್ದಾರೆ.

ಇನ್ನು ಜೈಲಿನಲ್ಲಿ ಅಧಿಕಾರಿಗಳು ಎಲ್ಲಾ ರೀತಿಯ ಕೋವಿಡ್ ನಿಯಮಗಳನ್ನು ಪಾಲಿಸುತ್ತಿದ್ದು ಅಗತ್ಯಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ತಿಳಿಸಿದ ಅವರು "ನಾವು ಕೈದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ಗಳನ್ನು ನೀಡುತ್ತಿದ್ದೇವೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ನೀಡಲಾಗುತ್ತಿದೆ. ಕೊರೊನಾ ವೈರಸ್ ದೃಢಪಟ್ಟ ಖೈದಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧೀಕ್ಷಕ ರಾಹುಲ್ ತಿಳಿಸಿದ್ದಾರೆ.
ಅಧಿಕೃತ ವರದಿಯ ಪ್ರಕಾರ, ಆಂಧ್ರಪ್ರದೇಶದಲ್ಲಿ ಕೊರೊನಾ ವೈರಸ್ನ ಸಕ್ರಿಯ ಪ್ರಕರಣಗಳ ಸಂಖ್ಯೆ 2,09,134 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 15,21,142 ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ವೈರಸ್ಗೆ 9,800 ಜನರು ಆಂಧ್ರಪ್ರದೇಶದಲ್ಲಿ ಪ್ರಾಣಕಳೆದುಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications