ತಿರುಪತಿ: ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರು ಪರಿಹಾರ
ಅಮರಾವತಿ, ಮಾರ್ಚ್ 27: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್ನಲ್ಲಿ ಶನಿವಾರ ರಾತ್ರಿ 11.30 ರ ಸುಮಾರಿಗೆ ಬಸ್ ಬಂಡೆಯೊಂದರಿಂದ ಕಂದರಕ್ಕೆ ಬಿದ್ದಿದೆ. ಪರಿಣಾಮವಾಗಿ, ಏಳು ಜನರು ಮೃತಪಟ್ಟಿದ್ದಾರೆ ಮತ್ತು 45 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಭಾಕರಪೇಟ್ ದೇವಾಲಯದ ಪಟ್ಟಣವಾದ ತಿರುಪತಿಯಿಂದ ಕೇವಲ 25 ಕಿಲೋಮೀಟರ್ ದೂರದಲ್ಲಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ತಿರುಪತಿಯ ಪೊಲೀಸ್ ವರಿಷ್ಠಾಧಿಕಾರಿ, "ಚಾಲಕರ ನಿರ್ಲಕ್ಷ್ಯದಿಂದ ಬಸ್ ಬಂಡೆಗೆ ಬಡಿದು ಕಂದರಕ್ಕೆ ಬಿದ್ದು ಅಪಘಾತ ಸಂಭವಿಸಿದೆ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ" ಎಂದು ಹೇಳಿದರು.
Andhra Pradesh | 7 people killed and 45 injured in a bus accident last night in Chittoor
— ANI (@ANI) March 27, 2022
Accident happened as the bus fell off the cliff due to driver's negligence in Bakrapeta, 25 kms away from Tirupati. Aggrieved were shifted to a nearby hospital: SP, Tirupati pic.twitter.com/Vi3DFj36Uy
ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ಚಿತ್ತೂರಿನ ನಗರಿ ಬಳಿಯ ಗ್ರಾಮಕ್ಕೆ ಖಾಸಗಿ ಬಸ್ ತೆರಳುತ್ತಿತ್ತು. ಬಸ್ನಲ್ಲಿ 52 ಜನರ ಮದುವೆ ಸಮಾರಂಭದ ಅತಿಥಿಗಳಿದ್ದರು. ಘಾಟ್ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಬಸ್ ಆಯತಪ್ಪಿ ಕಣಿವೆಗೆ ಬಿದ್ದಿದೆ.

ಪೊಲೀಸರು, ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಶನಿವಾರ ರಾತ್ರಿಯೇ ಆರಂಭಿಸಿದರು. ಆದರೆ, ಕಣಿವೆ 50 ಅಡಿ ಆಳವಿರುವುದರಿಂದ ಕತ್ತಲೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಬೆಳಗ್ಗೆಯೂ ಕಾರ್ಯಾಚರಣೆ ಮುಂದುವರೆದಿದೆ. ಬದುಕುಳಿದವರನ್ನು ಹಗ್ಗದ ಸಹಾಯದಿಂದ ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಆಘಾತ ವ್ಯಕ್ತಪಡಿಸಿದ ಆಂಧ್ರಪ್ರದೇಶ ಸಿಎಂ
ತಿರುಪತಿ ಬಳಿಯ ಭಾಕರಪೇಟದಲ್ಲಿ ಖಾಸಗಿ ಬಸ್ ಅಪಘಾತದಲ್ಲಿ ಮದುವೆ ದಿಬ್ಬಣದ ಬಸ್ ಕಂದಕಕ್ಕೆ ಉರುಳಿದ ಘಟನೆ ಬಗ್ಗೆ ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದಾರೆ.
ಬಸ್ ಅವಘಡಕ್ಕೆ ಕಾರಣ ಮತ್ತು ರಕ್ಷಣಾ ಕಾರ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ, ರಕ್ಷಣಾ ಕಾರ್ಯ ಹಾಗೂ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವ ಬಗ್ಗೆ ಆದ್ಯತೆ ನೀಡಲಾಗಿದೆ ಎಂದು ಸಿಎಂ ಕಚೇರಿ ಹೇಳಿದೆ.
ಅಪಘಾತ ಸಂಭವಿಸಿದ ತಕ್ಷಣ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳು ಅಪಘಾತದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಿದ್ದಾರೆ. ಚಂದ್ರಗಿರಿ ಶಾಸಕ ಚೇವಿರೆಡ್ಡಿ ಭಾಸ್ಕರ್ ರೆಡ್ಡಿ ಕೂಡ ಪರಿಹಾರ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದು ಸಿಎಂಗೆ ತಿಳಿಸಲಾಗಿದೆ. ಗಾಯಗೊಂಡವರಿಗೆ ತಿರುಪತಿಯ ಹತ್ತಿರದ ಸ್ಥಳೀಯ ಆಸ್ಪತ್ರೆಗಳಾದ ಸ್ವಿಮ್ಸ್, ರುಯಾ ಮತ್ತು ಬರ್ಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಪಿ ಸರ್ಕಾರ ತಲಾ 2 ಲಕ್ಷ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ 50 ಸಾವಿರ ಪರಿಹಾರ ನೀಡಲು ಸಿಎಂ ಮುಂದಾಗಿದ್ದಾರೆ. ಜತೆಗೆ, ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವಂತೆ ಆರೋಗ್ಯ ತಜ್ಞರಿಗೆ ಸಿಎಂ ಸೂಚಿಸಿದರು. ಸಂತ್ರಸ್ತರು ಚೇತರಿಸಿಕೊಳ್ಳುವವರೆಗೆ ಕಾವಲು ಕಾಯುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications