ತಿರುಪತಿ ತಿಮ್ಮಪ್ಪನ ಹುಂಡಿ : ಸಾರ್ವಕಾಲಿಕ ದಾಖಲೆ
ಅಮರಾವತಿ, ಸೆ 12: ವಿಶ್ವದ ಸಿರಿವಂತ ದೇವಾಲಯಗಳಲ್ಲಿ ಒಂದಾದ ತಿರುಮಲ ತಿರುಪತಿ ದೇವಸ್ಥಾನ, ಹುಂಡಿ ಗಳಿಕೆಯಲ್ಲಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಶ್ರಾವಣ ಮಾಸದಲ್ಲಿ ಶ್ರೀವಾರಿ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.
ಕೋವಿಡ್ ನಿರ್ಬಂಧ ತೆರವು, ಸಾಲುಸಾಲು ರಜೆಗಳು, ಶ್ರಾವಣ ಮಾಸದಿಂದಾಗಿ ಟಿಟಿಡಿಗೆ ದಾಖಲೆಯ ದೇಣಿಗೆ ಮೊತ್ತ ಹರಿದು ಬಂದಿದೆ. ಕಳೆದ ಮೇ ತಿಂಗಳಿನಿಂದ ಪ್ರತೀ ತಿಂಗಳು ನೂರು ಕೋಟಿಗೂ ಹೆಚ್ಚು ಹಣ ಹುಂಡಿಯ ಮೂಲಕ ಬಂದಿದೆ.
ಎರಡು ವರ್ಷಗಳಿಂದ ಕೋವಿಡ್ ನಿರ್ಬಂಧದಿಂದಾಗಿ ಸಿಬ್ಬಂದಿಗಳಿಗೆ ವೇತನ ನೀಡಲೂ ಟಿಟಿಡಿ ಪರದಾಡುತ್ತಿತ್ತು, ದೇವಾಲಯದ ಕೆಲವೊಂದು ಆಸ್ತಿಗಳನ್ನು ಮಾರಾಟ ಮಾಡಿ ಸಂಬಳ ನೀಡಲಾಗಿತ್ತು.

"ಶ್ರಾವಣ ಮಾಸದ ಹಿನ್ನಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುಮಾರು 22 ಲಕ್ಷಕ್ಕೂ ಹೆಚ್ಚು ಭಕ್ತರು ಶ್ರೀವಾರಿಯ ದರ್ಶನವನ್ನು ಪಡೆದಿದ್ದಾರೆ. ತಲೆಮುಡಿ ಮತ್ತು ಲಡ್ಡು ಪ್ರಸಾದದಿಂದಲೂ ಅಧಿಕ ದೇಣಿಗೆ ಸಂಗ್ರಹವಾಗಿದೆ"ಎಂದು ಟಿಟಿಡಿ ಅಧಿಕಾರಿ ಧರ್ಮಾರೆಡ್ಡಿ ಹೇಳಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ತಿರುಪತಿ ದೇವಾಲಯದಲ್ಲಿ ಹುಂಡಿಯ ಮೂಲಕ ಸಂಗ್ರಹವಾದ ದೇಣಿಗೆ ಮೊತ್ತ ಹೀಗಿದೆ:
ಮೇ : 130.29 ಕೋಟಿ ರೂಪಾಯಿ
ಜೂನ್ : 123.76 ಕೋಟಿ ರೂಪಾಯಿ
ಜುಲೈ : 139.46 ಕೋಟಿ ರೂಪಾಯಿ
ಆಗಸ್ಟ್ : 140.34 ಕೋಟಿ ರೂಪಾಯಿ
ದಸರಾ ವೇಳೆ ಕ್ಷೇತ್ರದಲ್ಲಿ ಬ್ರಹ್ಮೋತ್ಸವ ಇರುವುದರಿಂದ ವಿಐಪಿ ದರ್ಶನ ಮತ್ತು ವಿಶೇಷ ದರ್ಶನದ ಟಿಕೆಟ್ ಅನ್ನು ರದ್ದು ಮಾಡಲು ಟಿಟಿಡಿ ನಿರ್ಧರಿಸಿದೆ. ಭಕ್ತರಿಗೆ ಅನುಕೂಲವಾಗಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೆಪ್ಟಂಬರ್ 27ರಿಂದ ಒಂಬತ್ತು ದಿನ ಬ್ರಹ್ಮೋತ್ಸವ ನಡೆಯಲಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications