ಆಂಧ್ರದಲ್ಲಿ ಭಾರೀ ಸಂಚಲನ: ವೈಎಸ್ ಜಗನ್ ಐತಿಹಾಸಿಕ ನಿರ್ಧಾರ?
Recommended Video
ಆಂಧ್ರಪ್ರದೇಶದ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಹಿಂದಿನ ಎಲ್ಲಾ ಯೋಜನೆಗಳಿಗೆ ತಿಲಾಂಜಲಿ ಇಡುತ್ತಾ ಬರುತ್ತಿರುವ ಸಿಎಂ ವೈಎಸ್ ಜಗನ್ಮೋಹನ್ ರೆಡ್ಡಿ, ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ ಆಂಧ್ರದಲ್ಲಿ ಹೊಸ ಸಂಚಲನ ಮೂಡಿಸಿದೆ.
ಅಖಂಡ ಆಂಧ್ರ ವಿಭಜನೆಯಾದ ನಂತರ, ಅಮರಾವತಿಯನ್ನು ರಾಜಧಾನಿಯನ್ನಾಗಿ ನಾಯ್ಡು ಮಾಡಿದ್ದರು. ಗುಂಟೂರು ಜಿಲ್ಲೆಯ ಕೃಷ್ಣ ನದಿಯ ದಕ್ಷಿಣ ದಡದಲ್ಲಿ, ಈ ನಗರದ ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ 2015ರಲ್ಲಿ ನಡೆಸಿದ್ದರು.
ಗುಂಟೂರು ಮತ್ತು ವಿಜಯವಾಡ, ಅಮರಾವತಿಗೆ ಸಮೀಪವಿರುವ ಪ್ರಮುಖ ನಗರಗಳು. ಆಂಧ್ರಪ್ರದೇಶದ ರಾಜಧಾನಿ 'ಅಮರಾವತಿ' ಮೇಲೆ ಚಂದ್ರಬಾಬು ನಾಯ್ಡು ತೋರಿದ್ದ ಭಾರೀ ಅಕ್ಕರೆಯ ವಿಚಾರದಲ್ಲಿ ಸುವಾಸನೆಯೂ ಬರುತ್ತಿತ್ತು, ದುರ್ವಾಸನೆಯೂ ಹೊಡಿಯುತ್ತಿತ್ತು.
ಈಗ, ನಾಯ್ಡು ತೆಗೆದುಕೊಂಡ ನಿರ್ಧಾರಕ್ಕೆಲ್ಲಾ ಮಂಗಳ ಹಾಡಬೇಕು ಎನ್ನುವುದು ಜಗನ್ ಉದ್ದೇಶವೋ ಅಥವಾ ರಾಜ್ಯದ ಅಭಿವೃದ್ದಿಗೆ ಇದರ ಅವಶ್ಯಕತೆಯಿದೆಯೋ, ಒಟ್ಟಿನಲ್ಲಿ, ಆಂಧ್ರದ ಆಡಳಿತ ಯಂತ್ರವನ್ನು ಅಮರಾವತಿಯಿಂದ ಶಿಫ್ಟ್ ಮಾಡಲು ಜಗನ್ ಹೊರಟಿದ್ದಾರೆ ಎನ್ನುವ ಸುದ್ದಿ ಭರ್ಜರಿಯಾಗಿ ಹರಿದಾಡುತ್ತಿದೆ. ಆಂಧ್ರಕ್ಕೆ ನಾಲ್ಕು ಪ್ರಾದೇಶಿಕ ರಾಜಧಾನಿ, ಅವು ಯಾವುವು?

ಬಿಜೆಪಿ ಸಂಸದ ಟಿ ಜಿ ವೆಂಕಟೇಶ್ ಹೇಳಿಕೆ
ಈ ನಡುವೆ, ಬಿಜೆಪಿ ಸಂಸದ ಟಿ ಜಿ ವೆಂಕಟೇಶ್ ಅವರು, ಜಗನ್, "ರಾಜ್ಯದ ಒಟ್ಟಾರೆ ಅಭಿವೃದ್ದಿಗಾಗಿ, ನಾಲ್ಕು ಪ್ರಾದೇಶಿಕ ರಾಜಧಾನಿಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದಾರೆ" ಎನ್ನುವ ಸುದ್ದಿಯನ್ನು ಹೊರಗೆಡವಿದ್ದಾರೆ. "ಈ ವಿಚಾರದ ಬಗ್ಗೆ, ಜಗನ್, ಈಗಾಗಲೇ ದೆಹಲಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರ ಬಳಿ ಚರ್ಚೆ ನಡೆಸಿದ್ದಾರೆ" ಎಂದು ವೆಂಕಟೇಶ್ ಹೇಳಿದ್ದಾರೆ.

ಆಂಧ್ರಪ್ರದೇಶಕ್ಕೆ ನಾಲ್ಕು ರಾಜಧಾನಿಗಳನ್ನು ಮಾಡಲು ಹೊರಟಿರುವ ಜಗನ್
ತಾನು ಅಧಿಕಾರಕ್ಕೆ ಬಂದಾಗ ಐದೈದು ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದ್ದ ಜಗನ್, ಈಗ, ಆಂಧ್ರಪ್ರದೇಶಕ್ಕೆ ನಾಲ್ಕು ರಾಜಧಾನಿಗಳನ್ನು ಮಾಡಲು ಹೊರಟಿದ್ದಾರೆ. ಅವು, ರಾಜ್ಯದ, ಉತ್ತರ-ಕರಾವಳಿ ಭಾಗಕ್ಕೆ - ವಿಜಯನಗರಂ, ಪೂರ್ವ ಮತ್ತು ಪಶ್ಚಿಮ ಗೋದಾವರಿ ಭಾಗಕ್ಕೆ - ಕಾಕಿನಾಡ, ದಕ್ಷಿಣ ಕರಾವಳಿ ಭಾಗಕ್ಕೆ - ಗುಂಟೂರು ಮತ್ತು ರಾಯಲಸೀಮಾಗೆ ಭಾಗಕ್ಕೆ ಕಡಪ.

ಈಗಿನ ರಾಜಧಾನಿ, ಅಮರಾವತಿ, ಗುಂಟೂರು ಜಿಲ್ಲೆಯ ವ್ಯಾಪ್ತಿಗೆ
ಈಗಿನ ರಾಜಧಾನಿ, ಅಮರಾವತಿ, ಗುಂಟೂರು ಜಿಲ್ಲೆಯ ವ್ಯಾಪ್ತಿಗೆ ಬರುವುದರಿಂದ, ಇದುವರೆಗೆ ನಿರ್ಮಿಸಲಾದ ಕಟ್ಟಡಗಳನ್ನು ಈ ಭಾಗದ ರಾಜಧಾನಿಗೆ ಬಳಸಿಕೊಳ್ಳುವ ಯೋಚನೆ ಜಗನ್ ಅವರದ್ದು. ಬಿಜೆಪಿ ಸಂಸದರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವ ಬೋತ್ಸಾ ಸತ್ಯನಾರಾಯಣ, "ಅವರನ್ನೇ ಕೇಳಿ" ಎಂದು ನುಣುಚಿಕೊಂಡಿದ್ದಾರೆ.

ಕೃಷ್ಣಾ ನದಿ ಭಾಗದಲ್ಲಿ ಯಾವಾಗಲೂ ಪ್ರವಾಹದ ಸಮಸ್ಯೆ
ಇತ್ತೀಚೆಗಷ್ಟೇ ತೆಲುಗುದೇಶಂ ಪಕ್ಷದಿಂದ ಬಿಜೆಪಿಗೆ ನಿಯತ್ತು ತೋರಿರುವ ವೆಂಕಟೇಶ್, "ಕೃಷ್ಣಾ ನದಿ ಭಾಗದಲ್ಲಿ ಯಾವಾಗಲೂ ಪ್ರವಾಹದ ಸಮಸ್ಯೆ. ಹೀಗಾಗಿ, ಅಮರಾವತಿಯನ್ನು ರಾಜಧಾನಿಯನ್ನಾಗಿ ಮುಂದುವರಿಸುವ ವಿಚಾರದಲ್ಲಿ ಸಿಎಂ ಜಗನ್ ಸೂಕ್ತ ನಿರ್ಧಾರ ತೆಗೆದುಕೊಂಡು, ಮರುಪರಿಶೀಲನೆ ಮಾಡಬೇಕೆಂದು" ಮನವಿ ಮಾಡಿದ್ದಾರೆ.

ಚಂದ್ರಬಾಬು ನಾಯ್ಡುಗೆ ಭಾರೀ ಹಿನ್ನಡೆ
ಒಂದು ವೇಳೆ, ಆಂಧ್ರ ಪ್ರದೇಶಕ್ಕೆ ನಾಲ್ಕು ರಾಜಧಾನಿ ಮಾಡುವ ನಿರ್ಧಾರಕ್ಕೆ ಜಗನ್ ಬಂದರೆ, ಜೊತೆಗೆ, ಕೇಂದ್ರದಿಂದ ಅದಕ್ಕೆ ಅನುಮತಿ ದೊರೆತರೆ, ಅಮರಾವತಿಯನ್ನು ವಿಶ್ವದ ಅತ್ಯುತ್ತಮ ನಗರಗಳಲ್ಲಿ ಒಂದನ್ನಾಗಿ ಅಭಿವೃದ್ಧಿಪಡಿಸುವ ಸಲುವಾಗಿ ಮಹತ್ತರವಾದ ಯೋಜನೆಗಳನ್ನು ಸಿದ್ಧಪಡಿಸಿದ್ದ ಚಂದ್ರಬಾಬು ನಾಯ್ಡುಗೆ ಭಾರೀ ಹಿನ್ನಡೆಯಾಗಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications