ಹಾಲಿನ ಘಟಕದಲ್ಲಿ ಅನಿಲ ಸೋರಿಕೆಯಿಂದ 14 ಕಾರ್ಮಿಕರು ಅಸ್ವಸ್ಥ
ಅಮರಾವತಿ, ಆಗಸ್ಟ್.21: ಹಾಲಿನ ಡೈರಿ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆ ಸಂಭವಿಸಿದ್ದು, 14 ಮಂದಿ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರ ಪ್ರದೇಶ ಪುಟಲಪಟ್ಟು ಮಂಡಲದ ಬಂದಪಲ್ಲಿಯಲ್ಲಿ ನಡೆದಿದೆ.
ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಪುಟಲಪಟ್ಟು ಹಾಲಿನ ಡೈರಿಯಲ್ಲಿ ಅನಿಲ ಸೋರಿಕೆ ಸಂಭವಿಸಿರುವ ಬಗ್ಗೆ ಹ್ಯಾಟ್ಸನ್ ಕಂಪನಿಯಿಂದ ಮಾಹಿತಿ ಬಂದಿತ್ತು. ಸಂಜೆಯ ಶಿಫ್ಟ್ ನಲ್ಲಿ 14 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು, ಅಸ್ವಸ್ಥಗೊಂಡವರನ್ನು ಚಿತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ತಿರುಪತಿಯ ಎಸ್ ವಿ ಐಎಂಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಚಿತ್ತೂರ್ ಜಿಲ್ಲಾಧಿಕಾರಿ ಡಾ.ನಾರಾಯಣ್ ಭರತ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಅನಿಲ ಸೋರಿಕೆಯಲ್ಲಿ ಅಸ್ವಸ್ಥಗೊಂಡರೆಲ್ಲ ಮಹಿಳೆ ಕಾರ್ಮಿಕರು ಎನ್ನಲಾಗಿದೆ. ಇನ್ನು, ಘಟನೆಗೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಿರ್ಲಕ್ಷ್ಯದಿಂದ ಈ ಅನಿಲ ಸೋರಿಕೆ ಘಟನೆ ನಡೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಅಧಿಕಾರಿಗಳಿಂದ ಪರಿಸ್ಥಿತಿ ಪರಿಶೀಲನೆ:
ಕೈಗಾರಿಕಾ ಇಲಾಖೆಯ ಜನರಲ್ ಮ್ಯಾನೇಜರ್ ಮತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಪುಟಲಪಟ್ಟು ಸಬ್ ಇನ್ಸ್ ಪೆಕ್ಟರ್ ಚಿತ್ತೂರ್ ಜಿಲ್ಲಾಡಳಿತಕ್ಕೆ ಈ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಸಚಿವ ಪೆಡ್ಡಿರೆಡ್ಡಿ ರಾಮಚಂದ್ರ ರೆಡ್ಡಿ ಅವರು ಘಟನೆಯ ಕುರಿತು ಜಿಲ್ಲಾಡಳಿತದ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದಾರೆ. ಹಾಲಿನ ಡೈರಿಯಲ್ಲಿ ನಡೆದ ಅನಿಲ ಸೋರಿಕೆ ಸಂಬಂಧ ಸೂಕ್ತ ತನಿಖೆ ನಡೆಸಬೇಕು. ಅಸ್ವಸ್ಥಗೊಂಡ ಕಾರ್ಮಿಕರಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಸಚಿವರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications