ವಿಪಕ್ಷ ಶಾಸಕರನ್ನು ಗೃಹ ಬಂಧನದಲ್ಲಿರಿಸಿದ ಸಿಎಂ ಜಗನ್
ಅಮರಾವತಿ, ಡಿಸೆಂಬರ್ 27: ರೈತರ ಪ್ರತಿಭಟನೆಯಲ್ಲಿ ಭಾಗಿಯಾಗದಂತೆ ತಡೆಯಲು ಟಿಡಿಪಿ ಪಕ್ಷದ ಇಬ್ಬರು ಶಾಸಕರನ್ನು ಜಗನ್ ಮೋಹನ್ ರೆಡ್ಡಿ ಸರ್ಕಾರ ಗೃಹ ಬಂಧನದಲ್ಲಿರಿಸಿದೆ.
ಇಂದು ಜಗನ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಆಂಧ್ರಕ್ಕೆ ಮೂರು ರಾಜಧಾನಿ ಮಾಡುವ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ಮೂರು ರಾಜಧಾನಿಯಲ್ಲಿ ಅಮರಾವತಿ ನಗರ ಸೇರಿಲ್ಲವಾದ್ದರಿಂದ ಅಮರಾವತಿ ನಿರ್ಮಾಣಕ್ಕೆ ಭೂಮಿ ಕೊಟ್ಟಿದ್ದ ರೈತರು ಇದರ ವಿರುದ್ಧವಾಗಿ ಕೆಲವು ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ರೈತರು ಮಾಡುತ್ತಿರುವ ಪ್ರತಿಭಟನೆಯಲ್ಲಿ ಟಿಡಿಪಿ ಶಾಸಕರು ಭಾಗವಹಿಸುವುದನ್ನು ತಡೆಯಬೇಕೆಂಬ ಕಾರಣದಿಂದ ವಿಜಯವಾಡದ ಶಾಸಕರಾದ ಕೆಸಿನೇನಿ ಶ್ರೀನಿವಾಸ್, ಶಾಸಕ ಬುದ್ಧ ವೆಂಕನ್ನ ಅವರನ್ನು ಗೃಹ ಬಂಧನದಲ್ಲಿ ಇಡಲಾಗಿದೆ.

ಈ ಹಿಂದೆ ಟಿಡಿಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರಿಂದ ಜಮೀನು ಪಡೆದು ಅಮರಾವತಿ ನಗರ ನಿರ್ಮಾಣ ಮಾಡಿತ್ತು. ಇದನ್ನೇ ಆಂಧ್ರಪ್ರದೇಶದ ರಾಜಾಧಾನಿಯನ್ನಾಗಿ ಮಾಡಲು ನಿಶ್ಚಯಿಸಿತ್ತು. ಆದರೆ ಚುನಾವಣೆ ನಂತರ ಬಂದ ವೈಎಸ್ಆರ್ಕಾಂಗ್ರೆಸ್ನ ಜಗನ್ ಸರ್ಕಾರ, ಅಮರಾವತಿಯನ್ನು ಕೈಬಿಟ್ಟು ಮೂರು ರಾಜಧಾನಿಯನ್ನು ಮಾಡಲು ಹೊರಟಿದೆ, ಇದು ಅಮರಾವತಿಗೆ ಜಮೀನು ನೀಡಿದ್ದ ರೈತರನ್ನು ಕೆರಳಿಸಿದೆ.
'ರಾಜಧಾನಿ ಪರಿರಕ್ಷಣಾ ಸಮಿತಿ' ಹೆಸರಿನಲ್ಲಿ ಟಿಡಿಪಿ ಪ್ರತಿಭಟನೆಗೆ ಇಳಿದಿದ್ದು, ರೈತರೊಂದಿಗೆ ಕೈಜೋಡಿಸಿ ಪ್ರತಿಭಟನೆಗೆ ಉಗ್ರರೂಪ ನೀಡುತ್ತಿದೆ. ಇದು ಜಗನ್ ಸರ್ಕಾರವನ್ನು ಚಿಂತೆಗೀಡು ಮಾಡಿರುವ ಕಾರಣ, ಪ್ರತಿಭಟನೆಯನ್ನು ಹತ್ತಿಕ್ಕಲು ಟಿಡಿಪಿ ಶಾಸಕರಿಗೆ ಗೃಹ ಬಂಧನ ವಿಧಿಸಲಾಗಿದೆ.
ಜಗನ್ ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಚಂದ್ರಬಾಬು ನಾಯ್ಡು, 'ಏಕಪಕ್ಷೀಯ, ಸರ್ವಾಧಿಕಾರಿ ಮತ್ತು ದಮನಿಸುವ ಪ್ರವೃತ್ತಿಯನ್ನು ಸರ್ಕಾರ ಪ್ರದರ್ಶಿಸುತ್ತಿದೆ' ಎಂದಿದ್ದಾರೆ.
ಇಂದು ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಆಂಧ್ರದ ಮೂರು ಜಿಲ್ಲೆಗಳನ್ನು ರಾಜ್ಯದ ರಾಜಧಾನಿಯನ್ನಾಗಿ ಪ್ರಕಟಿಸಲಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications