Get Updates
Get notified of breaking news, exclusive insights, and must-see stories!

ಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ

ವಿಶಾಖಪಟ್ಟಣ, ಮೇ 7: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಅನಿಲ ಸೋರಿಕೆಯಾಗಿ ಈವರೆಗೂ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಹಲವು ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

Recommended Video

      ಬೇರೆ ರಾಜ್ಯಗಳ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಬೆಂಗಳೂರು ಕಮಿಷನರ್ ಹೇಳಿದ್ದೇನು? | Bhaskar Rao | Bengaluru

      ಘಟನೆ ಬಗ್ಗೆ ವಿಷಯ ತಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ವೇಳೆ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರ ಧನ ಘೋಷಿಸಿದರು.

      ಇನ್ನು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ. ಇನ್ನು ಪ್ರಾಥಮಿಕ ಚಿಕಿತ್ಸೆ ಪಡೆಯುವ ಕುಟುಂಬಗಳಿಗೆ 25 ಸಾವಿರ, ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 1 ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ.

      Andhra Govt Announced 1 Crore Compensation For Vizag Gas Leakage Victims

      ವರದಿಗಳ ಪ್ರಕಾರ ಇಂದು ಮುಂಜಾನೆ 3 ಗಂಟೆಗೆ ಗೋಪಾಲಪಟ್ಟಣಂ ಬಳಿ ಇರುವ ಆರ್.ಆರ್ ವೆಂಕಟಪುರಂ ನಲ್ಲಿನ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+