ಗ್ಯಾಸ್ ಸೋರಿಕೆಯಿಂದ ಮೃತ ಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾರ
ವಿಶಾಖಪಟ್ಟಣ, ಮೇ 7: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ಅನಿಲ ಸೋರಿಕೆಯಾಗಿ ಈವರೆಗೂ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಹಲವು ಜನರು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
Recommended Video
ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆ: 8 ಬಲಿ, 5000ಕ್ಕೂ ಅಧಿಕ ಮಂದಿ ಅಸ್ವಸ್ಥ
ಘಟನೆ ಬಗ್ಗೆ ವಿಷಯ ತಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ವೇಳೆ ಈ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 1 ಕೋಟಿ ಪರಿಹಾರ ಧನ ಘೋಷಿಸಿದರು.
An ex-gratia of Rs 1 crore each to be given to the families of the deceased in the #VizagGasLeakage incident. Ex gratia of Rs 10 lakhs to be given to those on ventilator: Andhra Pradesh Chief Minister YS Jaganmohan Reddy pic.twitter.com/KgtxGiPdbD
— ANI (@ANI) May 7, 2020
ಇನ್ನು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ಪ್ರಕಟಿಸಿದ್ದಾರೆ. ಇನ್ನು ಪ್ರಾಥಮಿಕ ಚಿಕಿತ್ಸೆ ಪಡೆಯುವ ಕುಟುಂಬಗಳಿಗೆ 25 ಸಾವಿರ, ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ 1 ಲಕ್ಷ ನೀಡಲು ಸರ್ಕಾರ ತೀರ್ಮಾನಿಸಿದೆ.
ವರದಿಗಳ ಪ್ರಕಾರ ಇಂದು ಮುಂಜಾನೆ 3 ಗಂಟೆಗೆ ಗೋಪಾಲಪಟ್ಟಣಂ ಬಳಿ ಇರುವ ಆರ್.ಆರ್ ವೆಂಕಟಪುರಂ ನಲ್ಲಿನ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ವಿಷಾನಿಲ ಸೋರಿಕೆಯಾಗಿದೆ. ಇದರಿಂದ 5 ಸಾವಿರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.