ಸಿಜೆಗಳ ವರ್ಗಾವಣೆಯಿಂದ ಜಗನ್ ಮೋಹನ್ಗೆ ಅನುಕೂಲ: ಆಂಧ್ರ ಹೈಕೋರ್ಟ್ ಅಸಮಾಧಾನ
ಅಮರಾವತಿ, ಡಿಸೆಂಬರ್ 31: ಆಂಧ್ರಪ್ರದೇಶ ಮತ್ತು ತೆಲಂಗಾಣ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಇತ್ತೀಚೆಗೆ ವರ್ಗಾವಣೆ ಮಾಡಿರುವುದು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಬಾಕಿ ಉಳಿದಿರುವ ಸಿಬಿಐ ಪ್ರಕರಣಗಳು ಮತ್ತು ಮೂರು ರಾಜಧಾನಿಗಳ ಕುರಿತಾದ ಪ್ರಕರಣಗಳ ವಿಚಾರಣೆಯನ್ನು ವಿಳಂಬ ಮಾಡಲಿದೆ. ಇದು ಜಗನ್ ಅವರಿಗೆ ಅನಗತ್ಯ ಅನುಕೂಲ ಮಾಡಿಕೊಡಲಿದೆ ಎಂದು ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ಹೇಳಿದೆ.
ಗುಂಟೂರು ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಲ್ಲಿನ ಸರ್ಕಾರಿ ಭೂಮಿ ಮಾರಾಟಕ್ಕೆ ಸಂಬಂಧಿಸಿದ ಪ್ರಕರಣದಿಂದ ಸ್ವತಃ ಹಿಂದೆ ಸರಿಯಬೇಕು ಎಂದು ಆಂಧ್ರಪ್ರದೇಶ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ರಾಕೇಶ್ ಕುಮಾರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಧಿಕಾರದಲ್ಲಿ ಇರುವವರಿಂದ ಆಂಧ್ರಪ್ರದೇಶ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ದಾಳಿಗೆ ಒಳಗಾಗಿದೆ ಎಂದು ಕೂಡ ಅವರು ಹೇಳಿದ್ದಾರೆ. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿ ಎನ್ವಿ ರಮಣ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರಿಗೆ ಪತ್ರ ಬರೆದಿದ್ದರು. ಇದು ಭಾರಿ ವಿವಾದ ಸೃಷ್ಟಿಸಿತ್ತು. ಜಗನ್ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಅನೇಕ ಅರ್ಜಿಗಳು ದಾಖಲಾಗಿದ್ದವು. ಆದರೆ ಅವುಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಮುಂದೆ ಓದಿ.

ಪತ್ರಕ್ಕೂ ವರ್ಗಾವಣೆಗೂ ಸಂಬಂಧ
ಆಂಧ್ರಪ್ರದೇಶ ಮತ್ತು ತೆಲಂಗಾಣ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಆದೇಶದ ವಿರುದ್ಧ ಹೇಳಿಕೆ ನೀಡಿರುವ ಅವರು, ಈ ವರ್ಗಾವಣೆ ಪ್ರಸ್ತಾವಕ್ಕೂ ರಾಜ್ಯ ನ್ಯಾಯಾಂಗದಲ್ಲಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ವಿರುದ್ಧದ ಪ್ರಕರಣಗಳು ಬಾಕಿ ಇರುವಾಗ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದ ಘಟನೆಗೂ ಸಂಬಂಧವಿದೆ ಎಂಬ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆ ಪಾರದರ್ಶಕ
ಕೊಲಿಜಿಯಂನ ಪ್ರಸ್ತಾವದ ವಿರುದ್ಧ ತಾವು ಯಾವುದೇ ಪ್ರಶ್ನೆ ಎತ್ತುತ್ತಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳು ಅಥವಾ ಅವುಗಳ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವುದು ಪಾರದರ್ಶಕತೆಯನ್ನು ಪ್ರತಿಫಲಿಸುತ್ತದೆ ಎಂದಿದ್ದಾರೆ.

ನ್ಯಾಯಾಂಗ ನಿಂದನೆ ಬಗ್ಗೆ ಮಾಹಿತಿ ಇಲ್ಲ
'ಜಗನ್ ಮೋಹನ್ ಅವರು ಕಳುಹಿಸಿದ ಪತ್ರಕ್ಕೆ ಸಂಬಂಧಿಸಿದಂತೆ ಸಿಜೆಐ ಯಾವುದೇ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದಾರೆಯೇ ಎನ್ನುವುದು ನಮಗೆ ಅರಿವಿಲ್ಲ. ಆದರೆ ಆಂಧ್ರ ಹೈಕೋರ್ಟ್ ಸಿಜೆ ಅವರನ್ನು ಸಿಕ್ಕಿಂ ಹೈಕೋರ್ಟ್ಗೆ ಮತ್ತು ತೆಲಂಗಾಣ ಸಿಜೆಯನ್ನು ಉತ್ತರಾಖಂಡ ಹೈಕೋರ್ಟ್ಗೆ ವರ್ಗಾವಣೆ ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಡಿ. 14ರಂದು ಶಿಫಾರಸು ಮಾಡಿರುವುದು ವಾಸ್ತವ ಎಂದಿದ್ದಾರೆ.

ಸತ್ಯ ಬದಲಾಗುವುದಿಲ್ಲ
ಸಿಜೆಐ ಅವರಿಗೆ ಅನೌಪಚಾರಿಕವಾಗಿ ಪತ್ರ ರವಾನಿಸಿದ ನಡೆಯಿಂದ ಆಂಧ್ರಪ್ರದೇಶದ ಮುಖ್ಯಮಂತ್ರಿಗೆ ಅಂತಿಮ ನೆಮ್ಮದಿ ಸಿಗಲಿದೆಯೇ ಅಥವಾ ಇಲ್ಲವೇ ಎನ್ನುವುದು ಮುಖ್ಯವಲ್ಲ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಅವರು ಯುಕ್ತವಲ್ಲದ ಅನುಕೂಲತೆ ಪಡೆಯುವಲ್ಲಿ ಸಫಲವಾಗುವುದರೊಂದಿಗೆ ವಾಸ್ತವಾಂಶ ಹಾಗೆಯೇ ಉಳಿಯುತ್ತದೆ.

ಪ್ರಕರಣಗಳ ವಿಚಾರಣೆ ವಿಳಂಬ
ಮುಖ್ಯಮಂತ್ರಿ ಪತ್ರ ಬರೆದು ಹಸ್ತಕ್ಷೇಪ ಮಾಡಿದ್ದರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಜನರು ಭಾವಿಸಬಹುದು. ಈ ವರ್ಗಾವಣೆ ಸ್ವಾಭಾವಿಕ ಎಂದು ಹೇಳಿದರೂ, ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಹೈದರಾಬಾದ್ನ ವಿಶೇಷ ನ್ಯಾಯಾಧೀಶರ ಮುಂದೆ ಬಾಕಿ ಉಳಿದಿರುವ ಸಿಬಿಐ ಪ್ರಕರಣಗಳ ವಿಚಾರಣೆ ವಿಳಂಬವಾಗಬಹುದು ಎಂದು ಅವರು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications