ಅತ್ಯಾಚಾರಕ್ಕೊಳಗಾದ ಮಹಿಳೆಯರಿಗೆ 21 ದಿನದಲ್ಲಿ ನ್ಯಾಯ!
ಅಮರಾವತಿ, ಡಿಸೆಂಬರ್ 12: ಅತ್ಯಾಚಾರ ಹಾಗೂ ಮಹಿಳಾ ದೌರ್ಜನ್ಯದ ಪ್ರಕರಣಗಳನ್ನು ಬೇಗ ಇತ್ಯರ್ಥಗೊಳಿಸುವ ಸಲುವಾಗಿ ಮುಖ್ಯಮಂತ್ರಿ ಜಗನ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ.
ತಿರುಪತಿ ದೇವಾಲಯ: ವೈಎಸ್ ಜಗನ್ ಸರಕಾರದ ಮಹತ್ವದ ನಿರ್ಧಾರ
'ಆಂಧ್ರ ಪ್ರದೇಶ ದಿಶಾ ಕಾನೂನು-2019' ಹೆಸರಿನ ಮಸೂದೆಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. ಸದ್ಯ ಆಂಧ್ರ ಪ್ರದೇಶ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನಾಳೆ ಅಧಿವೇಶನದಲ್ಲಿ 'ದಿಶಾ ಕಾನೂನು-2019' ಮಸೂದೆ ಚರ್ಚೆಗೆ ಬರುವ ಸಂಭವವಿದೆ.
ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ, ಮಕ್ಕಳಿಗೆ ತ್ವರಿತ ನ್ಯಾಯದಾನ, ದೋಷಿಗಳಿಗೆ ಮರಣದಂಡನೆವೆರೆಗೆ ಶಿಕ್ಷೆ ನೀಡುವುದು ಈ ಮಸೂದೆಯಲ್ಲಿ ಸೇರಿಸಲಾಗಿದೆ. 21 ದಿನಗಳೊಳಗೆ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬ ಮಹತ್ವದ ಅಂಶ ಇದರಲ್ಲಿ ಅಡಕವಾಗಿದೆ. ನೂತನ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಜಗನ್ಮೋಹನ ರೆಡ್ಡಿ ಅವರು ಹಲವಾರು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಳ್ಳುತ್ತಿರುವ ಭಾಗವಾಗಿ ಈ ಮಸೂದೆಯನ್ನು ತಂದಿದ್ದಾರೆ.