ತನಗೆ ಬೆಂಕಿ ಹಚ್ಚಿದ ವ್ಯಕ್ತಿಯನ್ನು ತನ್ನೊಂದಿಗೇ ದಹಿಸಿದ ಮಹಿಳೆ
ಹೈದರಾಬಾದ್, ಅಕ್ಟೋಬರ್ 13: ತನ್ನೊಂದಿಗಿನ ಸಂಬಂಧವನ್ನು ತಿರಸ್ಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಗೆ ಬೆಂಕಿ ಹಚ್ಚಿದ್ದು, ಸುಡುವ ಅಗ್ನಿ ಜ್ವಾಲೆಗಳೊಂದಿಗೆ ಆಕೆ ಆತನನ್ನೂ ತನ್ನೊಂದಿಗೆ ದಹಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ವಿಜಯವಾಡದ ಹನುಮಾನ್ ಪೇಟೆಯ ಪಾರ್ಸೆಲ್ ಕೇಂದ್ರವೊಂದರಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ತನ್ನೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯಿಂದ ದೂರಾಗಲು ಮಹಿಳೆ ನಿರ್ಧರಿಸಿದ್ದರು. ತನ್ನ ಜತೆಗಿನ ಸಂಬಂಧ ಮುಂದುವರಿಸುವಂತೆ ಆತ ಬೇಡಿಕೆ ಇರಿಸಿದ್ದ. ಅದನ್ನು ಆಕೆ ನಿರಾಕರಿಸಿದ್ದರಿಂದ ಕೋಪಗೊಂಡು ಬೆಂಕಿ ಹಚ್ಚಿದ್ದ.
ತನ್ನ ನಿವೇದನೆಯನ್ನು ಮಹಿಳೆ ನಿರಾಕರಿಸಿದಾಗ ಸಿಟ್ಟಿಗೆದ್ದ ಆತ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಬೆಂಕಿ ಆಕೆಯ ಸಂಪೂರ್ಣ ಮೈ ಆವರಿಸಿಕೊಂಡು ಮಹಿಳೆಯನ್ನು ಸುಟ್ಟುಹಾಕಿದೆ. ತೀವ್ರ ಸುಟ್ಟ ಗಾಯಗಳಿಂದಾಗಿ ಆಕೆ ಸ್ಥಳದಲ್ಲಿಯೇ ಸಜೀವ ದಹವನಾಗಿದ್ದಾರೆ. ಮಹಿಳೆಯು ವೃತ್ತಿಯಿಂದ ನರ್ಸ್ ಆಗಿದ್ದು, ವಿಜಯವಾಡದ ಕೊರೊನಾ ವೈರಸ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ಮುಂದೆ ಓದಿ.

ತನ್ನೊಂದಿಗೇ ಸುಟ್ಟ ಮಹಿಳೆ
ವ್ಯಕ್ತಿಯು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದಾಗ ಮಹಿಳೆ ಆತನನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಇದರಿಂದ ಬೆಂಕಿ ಆತನಿಗೂ ಆವರಿಸಿದೆ. ಮಹಿಳೆಯ ಹಿಡಿತದಿಂದ ತಪ್ಪಿಸಿಕೊಳ್ಳಲು ಆತನಿಂದ ಸಾಧ್ಯವಾಗಿಲ್ಲ. ಹೀಗಾಗಿ ಆ ವ್ಯಕ್ತಿ ಕೂಡ ಅಗ್ನಿ ಜ್ವಾಲೆಯಿಂದ ಸುಟ್ಟುಹೋಗಿದ್ದಾನೆ. ಆರೋಪಿ ವ್ಯಕ್ತಿಯ ದೇಹ ಶೇ 80ರಷ್ಟು ಸುಟ್ಟುಹೋಗಿತ್ತು. ಸುಟ್ಟ ಗಾಯಗಳಿಂದ ಆತ ಗುಂಟೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕಿರುಕುಳ ನೀಡುತ್ತಿದ್ದ
ಇವರಿಬ್ಬರೂ ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು. ಆದರೆ ಕೆಲವು ತಿಂಗಳ ಹಿಂದೆ ಮಹಿಳೆಯು ಆತನೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ್ದರು. ಇದನ್ನು ಒಪ್ಪಿಕೊಳ್ಳಲು ಆ ವ್ಯಕ್ತಿ ಸಿದ್ಧನಿರಲಿಲ್ಲ. ಆಕೆಯನ್ನು ನಿರಂತರವಾಗಿ ಹಿಂಬಾಲಿಸುವುದು, ಕಿರುಕುಳ ನೀಡುವುದನ್ನು ಆರಂಭಿಸಿದ್ದ. ತನ್ನನ್ನು ಮದುವೆಯಾಗುವಂತೆ ಸಹ ಆಕೆಯನ್ನು ಪೀಡಿಸುತ್ತಿದ್ದ.

ಮುಚ್ಚಳಿಕೆ ಬರೆಸಿಕೊಂಡಿದ್ದ ಪೊಲೀಸರು
ಆತನ ಕಾಟ ತಡೆಯಲಾಗದೆ ಮಹಿಳೆ ವಿಜಯವಾಡದ ಪೊಲೀಸ್ ಠಾಣೆಯೊಂದರಲ್ಲಿ ಅಕ್ಟೋಬರ್ 5ರಂದು ದೂರು ನೀಡಿದ್ದರು. ಪೊಲೀಸರು ಆತನನ್ನು ಠಾಣೆಗೆ ಕರೆಯಿಸಿ ಬುದ್ಧಿಮಾತು ಹೇಳಿದ್ದರು. ಇನ್ನು ಮುಂದೆ ಆಕೆಗೆ ಕಿರುಕುಳ ನೀಡುವುದಿಲ್ಲ ಎಂದು ಮುಚ್ಚಳಿಕೆ ಬರೆಯಿಸಿಕೊಂಡಿದ್ದರು.

ದೂರು ನೀಡಿದ್ದಕ್ಕಾಗಿ ಬೆದರಿಕೆ
ಆದರೆ, ಮಹಿಳೆ ಸೋಮವಾರ ಕೆಲಸ ಮುಗಿಸಿ ಮರಳುತ್ತಿರುವಾಗ ಕೊಠಡಿಯಲ್ಲಿ ಆಕೆಗೆ ಕಾಯುತ್ತಿದ್ದ ವ್ಯಕ್ತಿ, ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ಆಕೆಗೆ ಬೆದರಿಕೆ ಹಾಕತೊಡಗಿದ್ದ. ಆಕೆ ಬಗ್ಗದಿದ್ದಾಗ ತಾನು ತಂದಿದ್ದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಕೂಡಲೇ ಆತನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡ ಮಹಿಳೆ ತನ್ನೊಂದಿಗೆ ಆತನನ್ನೂ ದಹಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications