ಚೀನಾದಲ್ಲಿ ಸಿಲುಕಿದ ಆಂಧ್ರದ ಟೆಕ್ಕಿ, ಈ ತಿಂಗಳು ಮದ್ವೆ ಇದೆ ಪ್ಲೀಸ್!
ಕರ್ನೂಲ್, ಫೆಬ್ರವರಿ 03: ಚೀನಾದಲ್ಲಿ ಕೊರೊನಾ ವೈರಾಣು ದಾಳಿಗೆ ತುತ್ತಾಗಿರುವ ಪ್ರದೇಶಗಳ ಪೈಕಿ ವುಹಾನ್ ಪ್ರಾಂತ್ಯ ಹೆಚ್ಚು ತೊಂದರೆಗೊಳಗಾಗಿದೆ. ವುಹಾನ್ ನಲ್ಲಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳುವ ವ್ಯವಸ್ಥೆ ಕೊನೆಗೂ ಕಲ್ಪಿಸಲಾಗಿದೆ. ಆದರೆ, ಆಂಧ್ರ ಮೂಲದ ಟಿಸಿಎಸ್ ಟೆಕ್ಕಿಯೊಬ್ಬರು ಫ್ಲೈಟ್ ಟಿಕೆಟ್ ಸಿಗದೆ ಸಾಮಾಜಿಕ ಜಾಲ ತಾಣದ ಮೂಲಕ ನೆರವಿಗಾಗಿ ಮನವಿ ಮಾಡಿಕೊಂಡಿದ್ದಾರೆ.
ಚೀನಾದಲ್ಲಿರುವ ಭಾರತೀಯರನ್ನು ಎರಡು ವಿಶೇಷ ವಿಮಾನಗಳ ಮೂಲಕ ನವದೆಹಲಿಗೆ ಕರೆತರಲಾಗಿದೆ. ಆದರೆ, ಆಂಧ್ರಪ್ರದೇಶದ ಕರ್ನೂಲ್ ಮೂಲದ ಅನ್ನೆಂ ಜ್ಯೋತಿ ಎಂಬ ಯುವ ಸಾಫ್ಟ್ ವೇರ್ ಇಂಜಿನಿಯರ್ ಗೆ ಭಾರತಕ್ಕೆ ಮರಳುವ ಅವಕಾಶ ಕೈ ತಪ್ಪಿದೆ.
ಚೀನಾದ ವುಹಾನ್ ನಲ್ಲಿ ಟಿಸಿಎಸ್ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 22 ವರ್ಷದ ಜ್ಯೋತಿ ಮೊದಲ ಹಂತದಲ್ಲಿ ತೆರಳಿದ ಏರ್ ಇಂಡಿಯಾ ವಿಮಾನವೇರಬೇಕಾಗಿತ್ತು. ಆದರೆ, ಸೋಂಕು ತಗುಲಿದ ಶಂಕೆ ವ್ಯಕ್ತವಾಗಿದ್ದರಿಂದ ವಾಪಸ್ ಕರೆ ತರಲಿಲ್ಲ. ಆದರೆ, ನನಗೆ ಜ್ವರ ಮಾತ್ರ ಬಂದಿದ್ದು, ವೈರಾಣು ಪತ್ತೆಯಾಗಿಲ್ಲ ಎಂದು ಜ್ಯೋತಿ ಪ್ರತಿಕ್ರಿಯಿಸಿದ್ದಾರೆ.

ಫೆಬ್ರವರಿ 18ರಂದು ಆಂಧ್ರದಲ್ಲಿ ಮದುವೆ ನಿಗದಿಯಾಗಿದ್ದು, ಸ್ವದೇಶಕ್ಕೆ ಮರಳಲು ನನಗೆ ನೆರವಾಗಿ ಎಂದು ಭಾರತ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.
ಜ್ವರದ ತಾಪ ತಗ್ಗಿದ್ದರಿಂದ ಎರಡನೆಯ ವಿಮಾನದಲ್ಲಿ ತೆರಳಲು ಆಕೆಗೆ ಅನುಮತಿ ನೀಡುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ ಭಾನುವಾರ ವುಹಾನ್ ನಿಂದ ಭಾರತಕ್ಕೆ ಬಂದ ವಿಮಾನದಲ್ಲೂ ಆಕೆಗೆ ಪ್ರಯಾಣಿಸಲು ಅವಕಾಶ ನೀಡಿಲ್ಲ.
Sir only two engineers are not brought back to India 1)ms. annem jyothi 2)mr stya Sai. Please consider them and bring back baack from Wuhan to India https://t.co/apwpqX7Kv0
— k. Amarnath Reddy (@kAmarnathReddy1) February 1, 2020
"ನಾನು ಮತ್ತು ನನ್ನ 57 ಸಹೋದ್ಯೋಗಿಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ತೆರಳಲು ಅರ್ಜಿ ಸಲ್ಲಿಸಿದ್ದೆವು. ಜ್ವರದಿಂದಾಗಿ ಎರಡು ಬಾರಿ ವಿಮಾನವೇರಲು ಸಾಧ್ಯವಾಗಿಲ್ಲ. ಮಾನಸಿಕವಾಗಿ ಒತ್ತಡ ದೇಹದ ಉಷ್ಣಾಂಶದಲ್ಲಿ ಏರಿಕೆ ಕಂಡುಬಂದಿದೆ. ನಾನು ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆಗೆ ಒಳಪಡಲು ಸಿದ್ಧವಾಗಿದ್ದೇನೆ. ಚೀನಾದ ವೈದ್ಯಕೀಯ ಇಲಾಖೆಯವರು ನನ್ನಲ್ಲಿ ಕೊರೊನಾ ವೈರಸ್ ಇರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ದಯಮಾಡಿ ನನ್ನನ್ನು ಭಾರತಕ್ಕೆ ಕರೆದುಕೊಂಡು ಹೋಗಿ" ಎಂದು ಮನವಿ ಮಾಡಿಕೊಂಡಿದ್ದಾರೆ.
ಚೀನಾ ಹಾಗೂ ಮಾಲ್ಡೀವ್ಸ್ ನಲ್ಲಿದ್ದ 323 ಮಂದಿ ಭಾರತೀಯರನ್ನು ಸ್ವದೇಶಕ್ಕೆ ಮರಳಿ ಕರೆತರಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications