ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಯ್ಡುಗೆ ಮತ್ತೊಂದು ಆಘಾತ, ಕುಟುಂಬಸ್ಥರಿಗೆ ನೀಡಿದ್ದ ಭದ್ರತೆ ವಾಪಸ್

|
Google Oneindia Kannada News

ಅಮರಾವತಿ, ಜೂನ್ 25: ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಆಘಾತದ ಮೇಲೆ ಆಘಾತ ನೀಡುತ್ತಿರುವ ಜಗನ್ ಮೋಹನ್ ರೆಡ್ಡಿ ಸರ್ಕಾರ ಇದೀಗ ಮತ್ತೊಂದು ಆಘಾತ ನೀಡಿದೆ.

ನಾಯ್ಡು ಅವರು ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಕುಟುಂಬದ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಜಗನ್ ಸರ್ಕಾರ ಹಿಂತೆಗೆದುಕೊಂಡಿದೆ. ನಾಯ್ಡು ಪುತ್ರ ನಾರಾ ಲೋಕೇಶ್ ಅವರಿಗೆ ನೀಡಿದ್ದ Z ಕ್ಯಾಟಗರಿ ಭದ್ರತೆಯನ್ನು ವಾಪಸ್ ಪಡೆದಿದ್ದು, ಅವರಿಗೆ 2+2 ಗನ್ ಮ್ಯಾನ್ ಭದ್ರತೆಯನ್ನು ನೀಡಿದೆ.

ನಾಯ್ಡುಗೆ ಭಾರೀ ಆಘಾತ ನೀಡಿದ ಜಗನ್, ನಿವಾಸದ ಒಂದು ಭಾಗ ಕೆಡವಲು ಆದೇಶನಾಯ್ಡುಗೆ ಭಾರೀ ಆಘಾತ ನೀಡಿದ ಜಗನ್, ನಿವಾಸದ ಒಂದು ಭಾಗ ಕೆಡವಲು ಆದೇಶ

ಜೊತೆಗೆ ನಾಯ್ಡು ಅವರ ಕುಟುಂಬದ ಇತರ ಸದಸ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ಸಂಪೂರ್ಣ ವಾಪಸ್ ಪಡೆಯಲಾಗಿದೆ.

AP government reduces security of family members of Chandrababu Naidu

ಸೋಮವಾರವಷ್ಟೇ, ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರ ನಿವಾಸದ ಪಕ್ಕದಲ್ಲಿ ಕಟ್ಟಲಾದ ಪ್ರಜಾ ವೇದಿಕೆ ಕಟ್ಟಡವನ್ನು ನೆಲಸಮ ಮಾಡಲು ಆದೇಶಿಸಿದ್ದರು. ಈ ಕುರಿತು ಟಿಡಿಪಿ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಅಕ್ರಮವಾಗಿ ಕಟ್ಟಡ ಕಟ್ತಲಾಗಿದೆ ಎಂದು ದೂರಿ ಇದನ್ನು ಕೆಡವಲು ಅನುಮತಿ ನೀಡಲಾಗಿತ್ತು. ಅದರ ಮರುದಿನವೇ ಭದ್ರತೆ ವಾಪಸ್ ಪಡೆಯಲು ಸರ್ಕಾರ ಆದೇಶಿಸಿದೆ.

English summary
Andhra Pradesh government reduces security provided to the family members of former CM N. Chandrababu Naidu. His son & former state minister Nara Lokesh will now be provided 2+2 gunmen, earlier he had Z category security, Security for other family members is fully withdrawn.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X