ಜಗನ್ ಚಿಕ್ಕಪ್ಪನ ಸಾವಿನ ಪ್ರಕರಣ ಸಿಬಿಐ ತನಿಖೆಗೆ: ಹೈಕೋರ್ಟ್
ವಿಜಯವಾಡ, ಮಾರ್ಚ್ 12: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ರಾಜಶೇಖರ ರೆಡ್ಡಿ ಅವರ ಕಿರಿಯ ಸೋದರ, ಮಾಜಿ ಸಚಿವ ವೈ.ಎಸ್ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣವನ್ನು ಸಿಬಿಐ ನಡೆಸಲು ಆಂಧ್ರಪ್ರದೇಶ ಹೈಕೋರ್ಟ್ ಆದೇಶಿಸಿದೆ
Recommended Video
ಜಸ್ಟೀಸ್ ಯು ದುರ್ಗಾಪ್ರಸಾದ್ ರಾವ್ ಅವರಿದ್ದ ನ್ಯಾಯಪೀಠವು ಬುಧವಾರದಂದು ಈ ಕುರಿತಾದ ಅರ್ಜಿಗಳನ್ನು ಪರಿಶೀಲಿಸಿ, ಸಿಬಿಐ ತನಿಖೆಗೆ ಆದೇಶಿಸಿದ್ದಾರೆ. ವಿವೇಕಾನಂದ ರೆಡ್ಡಿ ಅವರ ಪತ್ನಿ ಸೌಭಾಗ್ಯಮ್ಮ, ಮಗಳು ಸುನೀತಾ, ಅಳಿಯ ನರೆರೆಡ್ಡಿ ರಾಜಶೇಖರ್ ರೆಡ್ಡಿ, ಬಿಜ್ಪಿ ನಾಯಕ ಸಿ ಆದಿನಾರಾಯಣ ರೆಡ್ಡಿ ಅವರು ಸಿಬಿಐ ತನಿಖೆಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದರು.
ಮಾರ್ಚ್ 15, 2019ರಂದು ವೈ.ಎಸ್. ವಿವೇಕಾನಂದ ರೆಡ್ಡಿ ಮೃತಪಟ್ಟಿದ್ದರು. ಹೃದಯಾಘಾತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು. ಅದರೆ, ಅವರ ಸಾವಿನ ಬಗ್ಗೆ ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದರು. ಅವರ ಆಪ್ತ ಸಹಾಯಕ ಕೃಷ್ಣಾ ರೆಡ್ಡಿ, ವಿವೇಕಾನಂದ ಅವರ ಬೆಡ್ರೂಂ ಮತ್ತು ಬಾತ್ರೂಂಗಳಲ್ಲಿ ರಕ್ತದ ಕಲೆಗಳು ಕಂಡುಬಂದಿರುವುದು ಶಂಕಾಸ್ಪದವಾಗಿದೆ ಎಂದು ಪ್ರಕರಣದ ತನಿಖೆ ನಡೆಸುವಂತೆ ಪುಲಿವೆಂದಲ ಪೊಲೀಸರಿಗೆ ದೂರು ನೀಡಿದ್ದರು.

ಇದಾದ ಬಳಿಕ ಜಗನ್ ಕೂಡಾ ತಮ್ಮ ಚಿಕ್ಕಪ್ಪನ ಸಾವಿನ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದ್ದರು. ಸುಮಾರು 1300 ಮಂದಿಯನ್ನು ಪ್ರಶ್ನಿಸಲಾಗಿತ್ತು. ಅನೇಕರಿಗೆ ನಾರ್ಕೋ ಅನಾಲಿಸಸ್ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಕೋರ್ಟಿಗೆ ಜಗನ್ ತಿಳಿಸಿದ್ದರು. ಆದರೆ, ಕುಟುಂಬದಿಂದ ಒತ್ತಡ ಹೆಚ್ಚಾಗಿದ್ದರಿಂದ ತಮ್ಮ ಹೇಳಿಕೆ ಹಿಂಪಡೆದಿದ್ದರಿಂದ ಸಿಬಿಐ ತನಿಖೆಗೆ ವಹಿಸಲು ದಾರಿ ಮಾಡಿಕೊಟ್ಟಿತ್ತು.
ಪುಲಿವೆಂದಲಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, 1999ರಲ್ಲಿ ಕಡಪ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಪ್ರವೇಶಿಸಿದ್ದರು. 2004ರ ಚುನಾವಣೆಯಲ್ಲಿಯೂ ಭರ್ಜರಿ ಗೆಲುವು ಕಂಡಿದ್ದರು. ಸಹೋದರ ರಾಜಶೇಖರ್ ರೆಡ್ಡಿ ನಿಧನದ ಬಳಿಕ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಾಂಗ್ರೆಸ್ ತೊರೆದು ವೈಎಸ್ಆರ್ ಕಾಂಗ್ರೆಸ್ ಸ್ಥಾಪಿಸಿದ್ದ ಜಗನ್ ಮೋಹನ್ ರೆಡ್ಡಿ ಮತ್ತು ವಿವೇಕಾನಂದ ರೆಡ್ಡಿ ನಡುವೆ ಮನಸ್ತಾಪವಿತ್ತು. ಆದರೆ, 2011ರ ವಿಧಾನಸಭೆ ಉಪ ಚುನಾವಣೆಯಲ್ಲಿ ಅತ್ತಿಗೆ ವೈ.ಎಸ್. ವಿಜಯಮ್ಮ ಅವರ ಎದುರು ಸೋಲು ಅನುಭವಿಸಿದ ನಂತರ ಜಗನ್ ಮೋಹನ್ ರೆಡ್ಡಿ ಅವರ ಪಕ್ಷವನ್ನು ಸೇರಿಕೊಂಡಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications