ಕಾಂಗ್ರೆಸ್ಗಿಂತಲೂ ಬಿಜೆಪಿ ಅಪಾಯಕಾರಿ: ಚಂದ್ರಬಾಬು ನಾಯ್ಡು
Recommended Video
ಅಮರಾವತಿ (ಆಂಧ್ರಪ್ರದೇಶ), ಡಿಸೆಂಬರ್ 24: ಕಾಂಗ್ರೆಸ್ ಪಕ್ಷಕ್ಕಿಂತಲೂ ಬಿಜೆಪಿ ಹೆಚ್ಚು ಅಪಾಯಕಾರಿ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಮೋದಿಯ ಸ್ವಭಾವದಿಂದಲೇ ದೇಶದ ಅರ್ಥಿಕತೆ ಹಾಳು: ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿರುವ ಕಾರಣಕ್ಕೆ ಅದರೊಂದಿಗೆ ಮೈತ್ರಿಗೆ ಟಿಡಿಪಿ ಬದ್ಧವಾಗಿದೆ ಎಂದು ನಾಯ್ಡು ಹೇಳಿದ್ದಾರೆ.
'ಮೂಲ ಮರೆಯಬೇಡಿ, ಟಿಡಿಪಿ ಇಲ್ಲದಿದ್ದರೆ, ಕೆಸಿಆರ್ ಎಲ್ಲಿರುತ್ತಿದ್ದರು?' ನಾಯ್ಡು ಪ್ರಶ್ನೆ!
ಸೆಪ್ಟೆಂಬರ್ ತಿಂಗಳಿನಲ್ಲಿ ಕರ್ನೂಲ್ನಲ್ಲಿ ಮಾತನಾಡುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿ ಸರ್ಕಾರ ರಚಿಸಿದ ಬಳಿಕ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಘೋಷಿಸಿದ್ದರು.
ರಾಜ್ಯದ ಸೋಲಿಗೆ ಈ ಹಿಂದೆ ಕಾಂಗ್ರೆಸ್ ಕಾರಣವಾಗಿತ್ತು ಎನ್ನುವುದು ಸತ್ಯ. ಆದರೆ ಅವರು ವಿಶೇಷ ಸ್ಥಾನಮಾನದ ವಿಚಾರದಲ್ಲಿ ಆಂಧ್ರಪ್ರದೇಶಕ್ಕೆ ಬೆಂಬಲ ನೀಡಲು ಸಿದ್ಧರಿದ್ದಾರೆ. ಆಂಧ್ರಪ್ರದೇಶ ಪುನರ್ ರಚನಾ ಕಾಯ್ದೆಯಲ್ಲಿನ ಅಂಶಗಳನ್ನು ಬಿಜೆಪಿ ಅನುಷ್ಠಾನಕ್ಕೆ ತರಲಿಲ್ಲ ಮತ್ತು ನಮ್ಮ ರಾಜ್ಯಕ್ಕೆ ವಂಚಿಸಿದೆ. ರಾಜ್ಯಕ್ಕೆ ಈಗ ಕಾಂಗ್ರೆಸ್ಗಿಂತಲೂ ಬಿಜೆಪಿ ಹೆಚ್ಚು ಅಪಾಯಕಾರಿ ಎಂದು ನಾಯ್ಡು ಹೇಳಿದ್ದಾರೆ.