ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಲಂಗಾಣದ ಸಿಂಗರೇನಿ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ: ನಾಲ್ವರ ಸಾವು

|
Google Oneindia Kannada News

ಹೈದರಾಬಾದ್, ಜೂನ್ 2: ತೆಲಂಗಾಣದ ಸಿಂಗರೇನಿ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ರಾಮಗುಂಡಂ ಬಳಿ ಇರುವ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮತ್ತಷ್ಟು ಮಾಹಿತಿ ಬರಬೇಕಿದೆ.

4 Killed In Blast In Singareni Collieries Mine In Telangana

ಪೆದ್ದಪಳ್ಳಿಯಲ್ಲಿರುವ ಗಣಿ ಇದಾಗಿದೆ. ನಾಲ್ವರ ಶವವನ್ನು ಗಣಿಯಿಂದ ಹೊರಕ್ಕೆ ತೆಗೆಯಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಮೃತರು ಬೇರೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಗಣಿಯಲ್ಲಿ ಸ್ಫೋಟಗೊಳಿಸುವುದಕ್ಕಾಗಿಯೇ ಅವರನ್ನು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ತೆಗೆದುಕೊಂಡಿದ್ದರು.ಕಾಸ್ಟ್-1 ಗಣಿ ಪ್ರದೇಶದಲ್ಲಿ ಘಟನೆ ನಡೆದಿದೆ.

ಮೃತರ ದೇಹವನ್ನು ಹತ್ತಿರದ ಗೋದಾವರಿಖಿನಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಮೇಲ್ಮೈ ಗಣಿ 1 ರ 2 ನೇ ಹಂತದಲ್ಲಿ ಈ ಅಪಘಾತ ಸಂಭವಿಸಿದೆ. ಮಹಾಲಕ್ಷ್ಮಿ ಒಬಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

English summary
At least four persons were killed in a blast in the Singareni Collieries open-cast mines near Ramagundam in North Telangana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X