ಗೋದಾವರಿ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 7 ಮಂದಿ ಸಾವು
ವಿಜಯವಾಡ, ಸೆಪ್ಟೆಂಬರ್ 15: ದೋಣಿ ಮುಳುಗಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ಪೂರ್ವ ಗೋದಾವರಿ ಜಿಲ್ಲೆಯ ಗೋದಾವರಿ ನದಿಯಲ್ಲಿ ನಡೆದಿದೆ. ಈ ದೋಣಿಯಲ್ಲಿ 50 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ.
"ನಾವು ಈ ವರೆಗೆ ಏಳು ಶವಗಳನ್ನು ತೆಗೆದಿದ್ದೇವೆ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ" ಎಂದು ಎಎಸ್ ಪಿ ರಾಹುಲ್ ದೇವ್ ಸಿಂಗ್ ಹೇಳಿದ್ದಾರೆ. ದೋಣಿಯು ಹೆಸರಾಂತ ಪ್ರವಾಸಿ ತಾಣ ಪಾಪಿಕೊಂಡಾಲು ಕಡೆಗೆ ಸಾಗುತ್ತಿತ್ತು. ಈ ವೇಳೆ ಅನಾಹುತ ಸಂಭವಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಪ್ರವಾಸಿಗರ ಪೈಕಿ ಬಹುತೇಕರು ಜೀವರಕ್ಷಕ ಜಾಕೆಟ್ ಧರಿಸಿದ್ದರು. ಸ್ಥಳೀಯರು 14 ಪ್ರವಾಸಿಗರನ್ನು ರಕ್ಷಿಸಿದ್ದಾರೆ. ನದಿಯಲ್ಲಿ ವಿಪರೀತ ನೀರು ಇದ್ದುದರಿಂದ ಪಾಪಿಕೊಂಡಾಲು ದೋಣಿ ಸೇವೆಯನ್ನು ನಿಲ್ಲಿಸಲಾಗಿತ್ತು. ಒಳಹರಿವು ಕಡಿಮೆ ಆಗಿತ್ತು ಎಂಬ ಕಾರಣಕ್ಕೆ ಮತ್ತೆ ಶುರು ಮಾಡಲಾಗಿತ್ತು. ಸದ್ಯಕ್ಕೆ ಗೋದಾವರಿ ನದಿಯಲ್ಲಿ ಐದು ಲಕ್ಷ ಕ್ಯೂಸೆಕ್ ಒಳಹರಿವಿದೆ.

ವರದಿಗಳ ಪ್ರಕಾರ, ಗಂದಿ ಪೋಚಮ್ಮ ದೇವಾಲಯದಿಂದ ಪ್ರಯಾಣ ಆರಂಭ ಆಗಿತ್ತು. ಕಚಲೂರು ಮಂಡ ಹಳ್ಳಿ ಬಳಿ ದೋಣಿ ಮುಳುಗಿದೆ. ಕೆಲವು ಪ್ರವಾಸಿಗರು ಈಜಿಕೊಂಡು ತುಟುಕುಂಟ ಹಳ್ಳಿ ಬಳಿ ಬದಿದ್ದಾರೆ. ಮತ್ತೊಂದು ಬದಿಯಲ್ಲಿ ಹಳ್ಳಿಗರು 14 ಮಂದಿಯನ್ನು ರಕ್ಷಿಸಿದ್ದಾರೆ.

ಸ್ನೇಹಿತನ ಕಾಪಾಡಲು ಹೋಗಿ ಅಮೆರಿಕದಲ್ಲಿ ಸಾವನ್ನಪ್ಪಿದ ಸಿಂಧನೂರು ಯುವಕ
ಇನ್ನು ದೋಣಿ ನಡೆಸುವವರು ನೀಡಿ ಮಾಹಿತಿ ಪ್ರಕಾರ, ದೋಣಿಯಲ್ಲಿ 90 ಮಂದಿ ಪ್ರಯಾಣಿಸಬಹುದಿತ್ತು ಹಾಗೂ ಅದರಲ್ಲಿ 150 ಜೀವರಕ್ಷಕ ಜಾಕೆಟ್ ಗಳಿದ್ದವು. ಇನ್ನು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಜಿಲ್ಲಾ ಅಧಿಕಾರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವೇಗವಾಗಿ ಮಾಡಲು ಸೂಚಿಸಿದ್ದಾರೆ. ಪ್ರವಾಸೋದ್ಯಮ ಸಚಿವರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications