ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆ!
ಗುಂಟೂರು, ಡಿಸೆಂಬರ್ 30: ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಶೇಖರಿಸಿಡಲಾಗಿದ್ದ ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಗೆ ಕಾರಣ ಆಗಬಹುದಾದಂತಹ ಅಂಶಗಳು ಪತ್ತೆಯಾಗಿವೆ.
ಮೆಣಸಿನಕಾಯಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಎಫ್ಲಾಟಾಕ್ಸಿನ್ ಎಂಬ ಕ್ಯಾನ್ಸರ್ ತರಬಹುದಾದಂತಹ ಅಂಶ ಸಾಮಾನ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ.

ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿರುವ ಸಂಶೋಧನಾ ವರದಿಯನ್ನು ಏಷ್ಯನ್ ಜರ್ನಲ್ ಆಫ್ ಫಾರ್ಮಾಸಿಟಿಕ್ಸ್ ಇತ್ತೀಚಿಗೆ ಪ್ರಕಟಿಸಿದೆ. ಮೆಣಸಿನಕಾಯಿಯಲ್ಲಿ ಮಣ್ಣಿನಲ್ಲಿ ಹರಡುವುದು, ತೇವಾಂಶದಲ್ಲಿ ಬಿಡುವುದು, ಅವೈಜ್ಞಾನಿಕವಾಗಿ ನಿರ್ವಹಣೆ, ಸಂಸ್ಕರಣೆ ಮಾಡುವುದರಿಂದ ಎಫ್ಲಾಟಾಕ್ಸಿನ್ ಅಂಶ ಕಾಣಿಸಿಕೊಳ್ಳುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಕೆಂಪು ಮೆಣಸಿನಕಾಯಿಯು ಮಣ್ಣಿನೊಂದಿಗೆ ಹೆಚ್ಚು ಸಂಪರ್ಕದಲ್ಲಿದ್ದರೆ ಈ ಕ್ಯಾನ್ಸರ್ಕಾರಕ ವಿಷ ಅದರಲ್ಲಿ ಸೇರಿಸಿಕೊಳ್ಳುತ್ತದೆ ಎನ್ನಲಾಗಿದೆ.
ಮಚಿಲಿಪಟ್ಟಣದ ಕೃಷ್ಣಾ ವಿಶ್ವವಿದ್ಯಾನಿಲಯದ ಸಂಶೋಧಕರು ಹಾಗೂ ವಿಜಯವಾಡದ ಕೆಬಿಎನ್ ಬಿಜಿ ಕಾಲೇಜು ಹಾಗೂ ಪಿ.ಬಿ. ಸಿದ್ಧಾರ್ಥ ಕಾಲೇಜು ಸೇರಿ ಎರಡು ಸ್ನಾತಕೋತ್ತರ ಕಾಲೇಜುಗಳು ಗುಂಟೂರು ನಗರದ ಹಲವೆಡೆ ಮೆಣಸಿನಕಾಯಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ.
ಸಂಗ್ರಹಿಸಿದ ಏಳು ಮಾದರಿಗಳಲ್ಲಿ ಐದರಲ್ಲಿ ಜಿ1, ಜಿ2 ಹಾಗೂ ಬಿ2 ಎಫ್ಲಾಟಾಕ್ಸಿನ್ಸ್ಗಳು ಪತ್ತೆಯಾಗಿವೆ. ಅಲ್ಲದೆ, ಎಫ್ಲಾಟಾಕ್ಸಿನ್ ಸ್ವಲ್ಪ ಪ್ರಮಾಣದಲ್ಲಿದ್ದರೂ ಕ್ಯಾನ್ಸರ್ಗೆ ಕಾರಣವಾಗಬಲ್ಲದು. ಇನ್ನು, ಇದರಿಂದ ವಯಸ್ಕರಿಗಿಂತ ಮಕ್ಕಳಿಗೆ ಹೆಚ್ಚು ತೊಂದರೆಯಾಗುತ್ತದೆ ಎಂದು ವರದಿಗಳು ಹೇಳಿವೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications