ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆ!
ಗುಂಟೂರು, ಡಿಸೆಂಬರ್ 30: ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಶೇಖರಿಸಿಡಲಾಗಿದ್ದ ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಗೆ ಕಾರಣ ಆಗಬಹುದಾದಂತಹ ಅಂಶಗಳು ಪತ್ತೆಯಾಗಿವೆ.
ಮೆಣಸಿನಕಾಯಿಯ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಎಫ್ಲಾಟಾಕ್ಸಿನ್ ಎಂಬ ಕ್ಯಾನ್ಸರ್ ತರಬಹುದಾದಂತಹ ಅಂಶ ಸಾಮಾನ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿದೆ.

ಗುಂಟೂರು ಮೆಣಸಿನಕಾಯಿಯಲ್ಲಿ ಕ್ಯಾನ್ಸರ್ಕಾರಕ ಅಂಶ ಪತ್ತೆಯಾಗಿರುವ ಸಂಶೋಧನಾ ವರದಿಯನ್ನು ಏಷ್ಯನ್ ಜರ್ನಲ್ ಆಫ್ ಫಾರ್ಮಾಸಿಟಿಕ್ಸ್ ಇತ್ತೀಚಿಗೆ ಪ್ರಕಟಿಸಿದೆ. ಮೆಣಸಿನಕಾಯಿಯಲ್ಲಿ ಮಣ್ಣಿನಲ್ಲಿ ಹರಡುವುದು, ತೇವಾಂಶದಲ್ಲಿ ಬಿಡುವುದು, ಅವೈಜ್ಞಾನಿಕವಾಗಿ ನಿರ್ವಹಣೆ, ಸಂಸ್ಕರಣೆ ಮಾಡುವುದರಿಂದ ಎಫ್ಲಾಟಾಕ್ಸಿನ್ ಅಂಶ ಕಾಣಿಸಿಕೊಳ್ಳುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಕೆಂಪು ಮೆಣಸಿನಕಾಯಿಯು ಮಣ್ಣಿನೊಂದಿಗೆ ಹೆಚ್ಚು ಸಂಪರ್ಕದಲ್ಲಿದ್ದರೆ ಈ ಕ್ಯಾನ್ಸರ್ಕಾರಕ ವಿಷ ಅದರಲ್ಲಿ ಸೇರಿಸಿಕೊಳ್ಳುತ್ತದೆ ಎನ್ನಲಾಗಿದೆ.
ಮಚಿಲಿಪಟ್ಟಣದ ಕೃಷ್ಣಾ ವಿಶ್ವವಿದ್ಯಾನಿಲಯದ ಸಂಶೋಧಕರು ಹಾಗೂ ವಿಜಯವಾಡದ ಕೆಬಿಎನ್ ಬಿಜಿ ಕಾಲೇಜು ಹಾಗೂ ಪಿ.ಬಿ. ಸಿದ್ಧಾರ್ಥ ಕಾಲೇಜು ಸೇರಿ ಎರಡು ಸ್ನಾತಕೋತ್ತರ ಕಾಲೇಜುಗಳು ಗುಂಟೂರು ನಗರದ ಹಲವೆಡೆ ಮೆಣಸಿನಕಾಯಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ.
ಸಂಗ್ರಹಿಸಿದ ಏಳು ಮಾದರಿಗಳಲ್ಲಿ ಐದರಲ್ಲಿ ಜಿ1, ಜಿ2 ಹಾಗೂ ಬಿ2 ಎಫ್ಲಾಟಾಕ್ಸಿನ್ಸ್ಗಳು ಪತ್ತೆಯಾಗಿವೆ. ಅಲ್ಲದೆ, ಎಫ್ಲಾಟಾಕ್ಸಿನ್ ಸ್ವಲ್ಪ ಪ್ರಮಾಣದಲ್ಲಿದ್ದರೂ ಕ್ಯಾನ್ಸರ್ಗೆ ಕಾರಣವಾಗಬಲ್ಲದು. ಇನ್ನು, ಇದರಿಂದ ವಯಸ್ಕರಿಗಿಂತ ಮಕ್ಕಳಿಗೆ ಹೆಚ್ಚು ತೊಂದರೆಯಾಗುತ್ತದೆ ಎಂದು ವರದಿಗಳು ಹೇಳಿವೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications