Get Updates
Get notified of breaking news, exclusive insights, and must-see stories!

ರಾಜಕೀಯ ತ್ಯಜಿಸುತ್ತೇನೆ: ಜಗನ್‌ಗೆ ಚಂದ್ರಬಾಬು ನಾಯ್ಡು ಸವಾಲು

ಅಮರಾವತಿ, ಡಿಸೆಂಬರ್ 18: ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರಚಿಸುವ ಸಂಬಂಧ ಜನಾಭಿಪ್ರಾಯ ಸಂಗ್ರಹಣೆ ಮಾಡಿ. ಒಂದು ವೇಳೆಗೆ ರಾಜ್ಯದ ಜನತೆ ಅದರ ಪರವಾಗಿ ಮತ ಹಾಕಿದರೆ ತಾವು ರಾಜಕೀಯವನ್ನೇ ತ್ಯಜಿಸುವುದಾಗಿ ಆಂಧ್ರಪ್ರದೇಶದ ವಿರೋಧ ಪಕ್ಷ ತೆಲುಗು ದೇಶಂ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಸವಾಲು ಹಾಕಿದ್ದಾರೆ.

ರಾಜ್ಯದ ಆರು ಕೋಟಿ ಜನರ ಬಯಕೆಗೆ ವಿರುದ್ಧವಾಗಿ ರಾಜಧಾನಿಯನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಯತ್ನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಮತ್ತು ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.

ಅಮರಾವತಿಯನ್ನು ರಾಜಧಾನಿಯನ್ನಾಗಿ ಉಳಿಸಿಕೊಳ್ಳುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಮರಾವತಿಯ ರಾಯಪುಡ ಗ್ರಾಮದಲ್ಲಿ ಆಯೋಜಿಸಲಾಗಿದ್ದ 'ಅಮರಾವತಿ ಜನಭೇರಿ' ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.

Chandrababu Naidu Challenges Jagan Mohan Reddy He Will Quit Politics If People Votes For Three Capitals

ದಕ್ಷಿಣ ಆಫ್ರಿಕಾದಲ್ಲಿ ಇರುವಂತೆ ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಕಳೆದ ವರ್ಷ ಜಗನ್ ಮೋಹನ್ ರೆಡ್ಡಿ ಅವರು ಬಯಕೆ ವ್ಯಕ್ತಪಡಿಸಿದ್ದರು. ವಿಶಾಖಪಟ್ಟಣಂ ಅನ್ನು ಕಾರ್ಯಕಾರಿ ರಾಜಧಾನಿ, ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿ ಮತ್ತು ಅಮರಾವತಿಯನ್ನು ಶಾಸಕಾಂಗ ರಾಜಧಾನಿ ಎಂದು ಕರೆಯುವ ಶಾಸನವನ್ನು ಅವರ ಸರ್ಕಾರ ಅನುಮೋದಿಸಿತ್ತು.

ಅಮರಾವತಿ ರಾಜಧಾನಿಯ ಅಭಿವೃದ್ಧಿಗಾಗಿ 33,000ಕ್ಕೂ ಅಧಿಕ ಕೃಷಿ ಭೂಮಿಯನ್ನು ಬಿಟ್ಟುಕೊಟ್ಟಿದ್ದ ರೈತರು ಮೂರು ರಾಜಧಾನಿಗಳ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವರ್ಷ ಡಿ. 17ರಂದು ಸ್ಥಳೀಯ ರೈತರು ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅಮರಾವತಿಯನ್ನು ಮಾತ್ರವೇ ರಾಜಧಾನಿಯನ್ನಾಗಿ ಉಳಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+