ರಾಜಕೀಯ ತ್ಯಜಿಸುತ್ತೇನೆ: ಜಗನ್ಗೆ ಚಂದ್ರಬಾಬು ನಾಯ್ಡು ಸವಾಲು
ಅಮರಾವತಿ, ಡಿಸೆಂಬರ್ 18: ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರಚಿಸುವ ಸಂಬಂಧ ಜನಾಭಿಪ್ರಾಯ ಸಂಗ್ರಹಣೆ ಮಾಡಿ. ಒಂದು ವೇಳೆಗೆ ರಾಜ್ಯದ ಜನತೆ ಅದರ ಪರವಾಗಿ ಮತ ಹಾಕಿದರೆ ತಾವು ರಾಜಕೀಯವನ್ನೇ ತ್ಯಜಿಸುವುದಾಗಿ ಆಂಧ್ರಪ್ರದೇಶದ ವಿರೋಧ ಪಕ್ಷ ತೆಲುಗು ದೇಶಂ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಸವಾಲು ಹಾಕಿದ್ದಾರೆ.
ರಾಜ್ಯದ ಆರು ಕೋಟಿ ಜನರ ಬಯಕೆಗೆ ವಿರುದ್ಧವಾಗಿ ರಾಜಧಾನಿಯನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಯತ್ನವನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಮತ್ತು ಜನತೆಯ ಕ್ಷಮೆಯಾಚಿಸಬೇಕು ಎಂದು ಅವರು ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ.
ಅಮರಾವತಿಯನ್ನು ರಾಜಧಾನಿಯನ್ನಾಗಿ ಉಳಿಸಿಕೊಳ್ಳುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಮರಾವತಿಯ ರಾಯಪುಡ ಗ್ರಾಮದಲ್ಲಿ ಆಯೋಜಿಸಲಾಗಿದ್ದ 'ಅಮರಾವತಿ ಜನಭೇರಿ' ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು.

ದಕ್ಷಿಣ ಆಫ್ರಿಕಾದಲ್ಲಿ ಇರುವಂತೆ ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಕಳೆದ ವರ್ಷ ಜಗನ್ ಮೋಹನ್ ರೆಡ್ಡಿ ಅವರು ಬಯಕೆ ವ್ಯಕ್ತಪಡಿಸಿದ್ದರು. ವಿಶಾಖಪಟ್ಟಣಂ ಅನ್ನು ಕಾರ್ಯಕಾರಿ ರಾಜಧಾನಿ, ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿ ಮತ್ತು ಅಮರಾವತಿಯನ್ನು ಶಾಸಕಾಂಗ ರಾಜಧಾನಿ ಎಂದು ಕರೆಯುವ ಶಾಸನವನ್ನು ಅವರ ಸರ್ಕಾರ ಅನುಮೋದಿಸಿತ್ತು.
ಅಮರಾವತಿ ರಾಜಧಾನಿಯ ಅಭಿವೃದ್ಧಿಗಾಗಿ 33,000ಕ್ಕೂ ಅಧಿಕ ಕೃಷಿ ಭೂಮಿಯನ್ನು ಬಿಟ್ಟುಕೊಟ್ಟಿದ್ದ ರೈತರು ಮೂರು ರಾಜಧಾನಿಗಳ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಕಳೆದ ವರ್ಷ ಡಿ. 17ರಂದು ಸ್ಥಳೀಯ ರೈತರು ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅಮರಾವತಿಯನ್ನು ಮಾತ್ರವೇ ರಾಜಧಾನಿಯನ್ನಾಗಿ ಉಳಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದ್ದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications