ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ-ಕೆಸಿಆರ್ ಮಾತುಕತೆ: ನಾಯ್ಡು ಮನಸಲ್ಲಿ ಕಸಿವಿಸಿ!

|
Google Oneindia Kannada News

ಅಮರಾವತಿ, ಡಿಸೆಂಬರ್ 27: ಸಂಯುಕ್ತ ಕೂಟದ ರಚನೆಯ ಸುದ್ದಿ ಹಬ್ಬುತ್ತಿರುವ ಹೊತ್ತಲ್ಲೇ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಸಾಕಷ್ಟು ಕಸಿವಿಸಿಯನ್ನುಂಟು ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ನಾಯ್ಡು, "ಸಂಯುಕ್ತ ಕೂಟದ ರಚನೆಯ ಬಗ್ಗೆ ವರದಿ ಒಪ್ಪಿಸಲು ಮೋದಿಯವರನ್ನು ಕೆ ಸಿ ಆರ್ ಭೇಟಿಯಾಗಿದ್ದರೆ?" ಎಂದು ಪ್ರಶ್ನಿಸಿ ಲೇವಡಿ ಮಾಡಿದ್ದಾರೆ.

ಕುತೂಹಲ ಕೆರಳಿಸಿದ ಮೋದಿ-ಕೆಸಿಆರ್ ಭೇಟಿ, ಉಭಯ ನಾಯಕರು ಚರ್ಚಿಸಿದ್ದೇನು?ಕುತೂಹಲ ಕೆರಳಿಸಿದ ಮೋದಿ-ಕೆಸಿಆರ್ ಭೇಟಿ, ಉಭಯ ನಾಯಕರು ಚರ್ಚಿಸಿದ್ದೇನು?

"ಸಂಯುಕ್ತ ಕೂಟದ ನೇತೃತ್ವ ಹೊತ್ತು, ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೊರಗಿಟ್ಟು ಪ್ರಾದೇಶಿಕ ಪಕ್ಷಗಳ ಒಕ್ಕೂಟ ರಚಿಸಲು ಹೊರಟ ಕೆಸಿಆರ್ ಮೋದಿಯವರನ್ನು ಭೇಟಿಯಾಗುವ ಅಗತ್ಯವೇನಿತ್ತು?" ಎಂದು ಅವರು ಪ್ರಶ್ನಿಸಿದ್ದಾರೆ.

Chandrababu Naidu criticises KCR and PM Modi meet

"ಕೆ ಚಂದ್ರಶೇಖರ ರಾವ್ ಅವರು ಮೋದಿಯವರನ್ನು ಭೇಟಿಯಾಗಿದ್ದು ತೆಲಂಗಾಣದ ಸಮಸ್ಯೆಗಳ ಬಗ್ಗೆ ಅವರ ಗಮನ ಸೆಳೆಯುವುದಕ್ಕಲ್ಲ. ಬದಲಾಗಿ ಸಂಯುಕ್ತ ಕೂಟದ ವರದಿ ಒಪ್ಪಿಸುವುದಕ್ಕೆ" ಎಂದು ಅವರು ದೂರಿದ್ದಾರೆ.

ತೆಲಂಗಾಣ ಸೆಂಟಿಮೆಂಟ್ : ನಾಯ್ಡು ಜುಟ್ಟು ನರೇಂದ್ರ ಮೋದಿ ಕೈಯಲ್ಲಿ!ತೆಲಂಗಾಣ ಸೆಂಟಿಮೆಂಟ್ : ನಾಯ್ಡು ಜುಟ್ಟು ನರೇಂದ್ರ ಮೋದಿ ಕೈಯಲ್ಲಿ!

ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ತೆಲಂಗಾಣ ರಾಷ್ಟ್ರ ಸಮಿತಿ ನಾಯಕ ಕೆಸಿಆರ್, ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಕೆಸಿಆರ್ ಪರೋಕ್ಷವಾಗಿ ಮೋದಿ ಬೆಂಬಲಕ್ಕೆ ನಿಂತಿದ್ದಾರೆ ಎಂಬ ವದಂತಿ ಹಬ್ಬಿದೆ.

ಕಾಂಗ್ರೆಸ್‌ಗಿಂತಲೂ ಬಿಜೆಪಿ ಅಪಾಯಕಾರಿ: ಚಂದ್ರಬಾಬು ನಾಯ್ಡುಕಾಂಗ್ರೆಸ್‌ಗಿಂತಲೂ ಬಿಜೆಪಿ ಅಪಾಯಕಾರಿ: ಚಂದ್ರಬಾಬು ನಾಯ್ಡು

ಭೇಟಿಯ ಸಂದರ್ಭದಲ್ಲಿ ತೆಲಂಗಾಣಕ್ಕೆ ಸಂಬಂಧಿಸಿದ ಕೆಲ ಬೇಡಿಕೆಗಳನ್ನೂ ಕೆಸಿಆರ್ ಮೋದಿಯವರ ಮುಂದಿಟ್ಟಿದ್ದಾರೆ.

English summary
Andhra Pradesh Chief Minister N Chandrababu Naidu on Wednesday took a sharp jibe at Telangana Rashtra Samithi chief K Chandrashekar Rao or KCR -- who has proposed a non-BJP, non-Congress alliance -- over his meeting with Prime Minister Narendra Modi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X