ಮಮತಾ ವಿರುದ್ಧ ಬಿಜೆಪಿ ಸೇಡು ತೀರಿಸಿಕೊಳ್ಳುತ್ತಿದೆ: ನಾಯ್ಡು
ಅಮರಾವತಿ, ಫೆಬ್ರವರಿ 04: 'ಬಿಜೆಪಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ. ಅದರ ಪರಿಣಾಮವೇ ಸಿಬಿಐ ವಿವಾದ' ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ದೀದಿ-ಸಿಬಿಐ ವಿವಾದ LIVE: ಹಠ ಬಿಡದ ಮಮತಾ, ಕೇಂದ್ರಕ್ಕೇ ಸವಾಲು
ಜನವರಿ 19 ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ವಿಪಕ್ಷಗಳ ಮಹಾ ಸಮಾವೇಶ ಯಶಸ್ವಿಯಾಗಿದ್ದನ್ನು ಸಹಿಸಲಾಗಿದೆ ಬಿಜೆಪಿ ಮಮತಾ ಬ್ಯಾನರ್ಜಿ ಅವರ ಮೂಲಕ ಸೇಡು ತೀರಿಸಿಕೊಳ್ಳಲು ಸಿಬಿಐ ಅನ್ನು ಬಳಸಿಕೊಳ್ಳುತ್ತಿದೆ ಎಂದು ನಾಯ್ಡು ಹೇಳಿದ್ದಾರೆ.
ಪಟ್ಟು ಬಿಡದ ದೀದಿ: ಸುಪ್ರೀಂ ಕೋರ್ಟ್ ಮೊರೆಹೋದ ಸಿಬಿಐ
ಬಹುಕೋಟಿ ಶಾರದಾ ಸಮೂಹ ಸಂಸ್ಥೆ ಚಿಟ್ ಫಂಡ್ ಹಗರಣ ಹಾಗೂ ರೋಸ್ ವ್ಯಾಲಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಮಹಾನಗರದ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಬಂಧಿಸಲು ಸಿಬಿಐ ಮುಂದಾಗಿತ್ತು. ಆದರೆ ಸಿಬಿಐ ಅಧಿಕಾರಿಗಳನ್ನೇ ಬಂಗಾಳದ ಪೊಲೀಸರು ವಶಕ್ಕೆ ಪಡೆದಿದ್ದರು.
ತನಿಖೆಗೆ ಬಂದ ಸಿಬಿಐ ಕ್ರಮವನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಸಂವಿಧಾನ ಉಳಿಸಿ' ಎಂದು ಕೋಲ್ಕತ್ತದ ಮೆಟ್ರೋ ಚಾನೆಲ್ ಬಳಿ ಧರಣಿ ಆರಂಭಿಸಿದ್ದಾರೆ.