ಚಂದ್ರಬಾಬು ನಾಯ್ಡು ಅವರನ್ನು ಕ್ವಾರಂಟೈನ್ಗೆ ಒಳಪಡಿಸಿ: ವೈಎಸ್ಆರ್ ಕಾಂಗ್ರೆಸ್ ಒತ್ತಾಯ
ಅಮರಾವತಿ, ಮೇ 27: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಕ್ವಾರಂಟೈನ್ಗೆ ಒಳಪಡಿಸಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಹೇಳಿದ್ದಾರೆ.
ಸೋಮವಾರದಿಂದ ದೇಶೀಯ ವಿಮಾನಗಳು ಕಾರ್ಯಾಚರಿಸುತ್ತಿದ್ದರೂ ರಸ್ತೆಯ ಮೂಲಕ ತೆಲಂಗಾಣಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶ ಗಡಿಯಲ್ಲಿ 5 ಅಡಿ ಎತ್ತರದ ತಡೆಗೋಡೆ ನಿರ್ಮಿಸಿದ ತಮಿಳುನಾಡು
ಎರಡು ತಿಂಗಳ ನಂತರ ಮೊದಲ ಬಾರಿಗೆ ಹೈದರಾಬಾದಿಗೆ ಆಗಮಿಸಿದ್ದಾರೆ. ಟಿಡಿಪಿ ಅಧ್ಯಕ್ಷ ಗಡಿಕೋಟ ಶ್ರೀಕಾಂತರೆಡ್ಡಿ ಮಾತನಾಡಿ, ಇಡೀ ದೇಶವೇ ಮೇ 31ರವರೆಗೆ ಲಾಕ್ಡೌನ್ ಪಾಲಿಸುತ್ತಿರುವಾಗ ನಾಯ್ಡು ಈ ರೀತಿ ನಡೆದುಕೊಳ್ಳುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.
ಹೈದರಾಬಾದಿನಲ್ಲಿ ಚಂದ್ರಬಾಬು ನಾಯ್ಡು ಜಾಥಾ ನಡೆಸಿದರು. ಆದರೆ ಯಾವುದೇ ಮಾಸ್ಕ್ ಅಥವಾ ಬಟ್ಟೆಯನ್ನು ಮುಖಕ್ಕೆ ಕಟ್ಟಿಕೊಂಡಿರಲಿಲ್ಲ. ಹಿರಿಯ ರಾಜಕೀಯ ಮುಖಡರಾಗಿ ಈ ರೀತಿ ನಡೆದುಕೊಂಡಿದ್ದು ಸರಿಯೇ, ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.
ರೆಡ್ಝೋನ್ನಿಂದ ಬಂದಿರುವ ಕಾರಣ ಅವರನ್ನು ಕ್ವಾರಂಟೈನ್ಗೆ ಕಳುಹಿಸಲೇಬೇಕು. ಮಾಜಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರಿ ಝಡ್ ಪ್ಲಸ್ ಸೆಕ್ಯುರಿಟಿ ನೀಡಲಾಗುತ್ತಿದೆ. 2003 ರಲ್ಲಿ ಅವರ ಮೇಲೆ ದಾಳಿ ನಡೆದಿತ್ತು.