ಆಂಧ್ರ ಕೆಮಿಕಲ್ ಲ್ಯಾಬ್ನಲ್ಲಿ ಬೆಂಕಿ: 6 ಮಂದಿ ಬಲಿ, 11 ಮಂದಿಗೆ ಗಾಯ
ವಿಜಯವಾಡ, ಏಪ್ರಿಲ್ 14: ಆಂಧ್ರಪ್ರದೇಶದ ಪೋರಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೋರಸ್ ಲ್ಯಾಬ್ಸ್ ರಾಜ್ಯದ ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಮ್ನಲ್ಲಿದೆ. ಈ ಅವಘಡದಲ್ಲಿ ಸಾವನ್ನಪ್ಪಿದವರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಆ ಪೈಕಿ ಅಧಿಕ ಮಂದಿ ಬಿಹಾರ ಮೂಲದವರು ಎಂದು ಮಾಹಿತಿ ಲಭ್ಯವಾಗಿದೆ.
ಬುಧವಾರ ತಡರಾತ್ರಿ ಅನಿಲ ಸೋರಿಕೆ ಉಂಟಾಗಿ ಸ್ಪೋಟವಾಗಿದೆ. ಈ ಅಗ್ನಿ ಅವಘಡದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾತ್ರಿ 11.30 ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ನುಜ್ವಿಡ್ನ ಉಪ ಪೊಲೀಸ್ ಅಧೀಕ್ಷಕ ಬಿ ಶ್ರೀನಿವಾಸುಲು ತಿಳಿಸಿದ್ದಾರೆ.

"ಘಟನೆ ಸಂಭವಿಸಿದಾಗ ಪೋರಸ್ ಲ್ಯಾಬೋರೇಟರೀಸ್ ಪ್ರೈವೇಟ್ ಲಿಮಿಟೆಡ್ನ ನಾಲ್ಕನೇ ಘಟಕದಲ್ಲಿ 20 ಜನರು ಇದ್ದರು," ಎಂದು ಅಧಿಕಾರಿ ಹೇಳಿದರು. ಸ್ಫೋಟ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಸಮೀಪದ ಜನರಿಗೆ ಸ್ಥಳಾಂತರಗೊಳ್ಳಲು ಎಚ್ಚರಿಕೆ
ಬೆಂಕಿಯನ್ನು ನಂದಿಸಲು ನುಜ್ವಿಡ್ ಮತ್ತು ಹತ್ತಿರದ ಘಟಕಗಳಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಅನಿಲ ಸೋರಿಕೆಯು ಅಪಾಯಕಾರಿ ಆಗಬಹುದು ಎಂಬ ಆತಂಕದಲ್ಲಿ ಹತ್ತಿರದ ಜನರಿಗೆ ಸ್ಥಳಾಂತರಗೊಳ್ಳಲು ಎಚ್ಚರಿಕೆ ನೀಡಲಾಗಿದೆ.
"ಗಾಯಾಳುಗಳನ್ನು ನುಜ್ವಿಡ್ ಮತ್ತು ವಿಜಯವಾಡದ ಸರ್ಕಾರಿ ಜನರಲ್ ಆಸ್ಪತ್ರೆಗಳಿಗೆ ರವಾನಿಸಲಾಗಿದೆ," ಎಂದು ಶ್ರೀನಿವಾಸಲು ಹೇಳಿದರು. ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದು ಕೂಡಾ ಅಧಿಕಾರಿ ಮಾಹಿತಿ ನೀಡಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications