ಅತ್ಯುಗ್ರ ತಿತ್ಲಿ ಚಂಡಮಾರುತಕ್ಕೆ ಆಂಧ್ರದಲ್ಲಿ 8 ಮಂದಿ ಬಲಿ
ಅಮರಾವತಿ, ಅಕ್ಟೋಬರ್ 11: ಆಂಧ್ರಪ್ರದೇಶ ಮತ್ತು ಒಡಿಶಾಕ್ಕೆ ಅಪ್ಪಳಿಸಿರುವ ತಿತ್ಲಿ ಚಂಡಮಾರುತಕ್ಕೆ ಆಂಧ್ರದಲ್ಲಿ 8 ಮಂದಿ ಮೃತರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಆಂಧ್ರದ ಶ್ರೀಕಾಕುಲಂ ಮತ್ತು ವಿಜಯನಗರಂ ಜಿಲ್ಲೆಗಳಲ್ಲಿ ಎಂಟು ಮಂದಿ ಮೃತರಾಗಿದ್ದು, ತಿತ್ಲಿ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಸಾರ್ವಜನಿಕ ಜನಜೀವನ ಅಸ್ತವ್ಯಸ್ತವಾಗಿದೆ.
#WATCH: Latest visuals from Andhra Pradesh's Srikakulam. #TitliCyclone made a landfall in the region early morning today. pic.twitter.com/ckoGJblyti
— ANI (@ANI) October 11, 2018
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ತಿತ್ಲಿ ಚಂಡಮಾರುತದಿಂದ ಮುನ್ನೆಚ್ಚರಿಕೆ ವಹಿಸುವಂತೆ ಇದುವರೆಗೂ 3 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಗಂಟೆಗೆ 120 ರಿಂದ 140 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಅದರೊಟ್ಟಿಗೆ ಮಳೆಯೂ ಸಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬೀ ಸಮುದ್ರದಲ್ಲಿ ಲುಬಾನ್ ಎಂಬ ಚಂಡಮಾರುತವೂ ಉಂಟಾಗುವ ಸಂಭವವಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.












Click it and Unblock the Notifications